ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ: ಡಿಕೆಶಿ

Published : Nov 09, 2024, 06:06 AM IST
ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ: ಡಿಕೆಶಿ

ಸಾರಾಂಶ

ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ. 

ಚನ್ನಪಟ್ಟಣ (ನ.09): ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಪ್ರಧಾನಿ ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ. ತಾಲೂಕಿನ ಚಕ್ಕೆರೆ, ಹೊನ್ನನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಪರ ಅವರು ಭರ್ಜರಿ ಪ್ರಚಾರ ನಡೆಸಿದರು. ‘ಕೊತ್ವಾಲ್ ನ ಹತ್ತಿರ 100ರು.ಗೆ ಕೆಲಸ ಮಾಡುತ್ತಿದ್ದ ಡಿಕೆಶಿ, ರೈತನಿಗೆ ನೋವಾದರೆ ಎಂದಾದರೂ ಕಣ್ಣೀರು ಹಾಕಿದ್ದಾರಾ?’ ಎಂಬ ದೇವೇಗೌಡರ ಟೀಕೆಗೆ ತಿರುಗೇಟು ನೀಡಿ, ಜೆಡಿಎಸ್‌ನವರು ಅತ್ತರೆ ಅಳಲಿ, ಕುಣಿದರೆ ಕುಣಿಯಲಿ, ನಮ್ಮ ಪಾಡಿಗೆ ನಾವಿರೋಣ ಎಂದರು.

ದೇವೇಗೌಡರೆ, ನಾನು ನಿಮ್ಮ ಹಾಗೂ ನಿಮ್ಮ ಜಮೀನಿನ ವಿಚಾರಗಳನ್ನು ಈಗ ಮಾತನಾಡಲು ಹೋಗುವುದಿಲ್ಲ. ಚುನಾವಣೆಗಾಗಿ ನಿಮ್ಮನ್ನು ಟೀಕಿಸುವುದಿಲ್ಲ. ನಿಮ್ಮ ವಯಸ್ಸಿಗೆ ನಾನು ಗೌರವ ನೀಡುತ್ತೇನೆ. ಬಡವರಿಗೆ ಆಗಿರುವ ಮೋಸದ ಬಗ್ಗೆ ಧ್ವನಿ ಎತ್ತಲು ನಾನು ಈ ಪ್ರಶ್ನೆ ಕೇಳಬೇಕಾಗಿದೆ ಎಂದರು.

ಕಾರ್ಯಕರ್ತರ ಪರಿಸ್ಥಿತಿ ಏನು?: ನನ್ನ ಮೊಮ್ಮಗನ ಪಟ್ಟಾಭಿಷೇಕ ಮಾಡುವವರೆಗೂ ನಾನು ಬದುಕಿರುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಬಹಳ ಸಂತೋಷ, ಆದರೆ, ನಿಮಗಾಗಿ ದುಡಿದ ಕಾರ್ಯಕರ್ತರ ಪರಿಸ್ಥಿತಿ ಏನಾಗಬೇಕು? ಕುಮಾರಸ್ವಾಮಿಯವರು ಕ್ಷೇತ್ರದ ಒಬ್ಬ ಕಾರ್ಯಕರ್ತನಿಗೆ ಯಾವುದಾದರೂ ಅಧಿಕಾರ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.

ಇನ್ನೂ ಮೂರೂವರೆ ವರ್ಷ ನಾನೇ ಸಿಎಂ: ಸಿಬಿಐ, ಇ.ಡಿ, ಐಟಿ ಬಳಸಿ ನನ್ನ ವಿರುದ್ಧ ಷಡ್ಯಂತ್ರ ಎಂದ ಸಿದ್ದರಾಮಯ್ಯ

ಯೋಗೇಶ್ವರ್ ಅವರು ಕ್ಷೇತ್ರದಲ್ಲಿ ನೀರಾವರಿ ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿದ್ದಾರೆ. ಸತ್ತೇಗಾಲದಿಂದ ನೀರು ತರುವ ಯೋಜನೆ ಮಾಡುತ್ತಿದ್ದೇವೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ನೀವು ಮಾಡಿದ್ದೀರಾ?. ಕ್ಷೇತ್ರಕ್ಕೆ ಇಂತಹ ಕಾರ್ಯಕ್ರಮವನ್ನು ನಾವು ಕೊಟ್ಟಿದ್ದೇವೆ ಎಂದು ನೀವು ಹೇಳಿದರೇ ಈ ಕೂಡಲೇ ನಾನು ಈ ಚುನಾವಣಾ ಪ್ರಚಾರ ನಿಲ್ಲಿಸಿ ಇಲ್ಲಿಂದ ಹೊರಟು ಹೋಗುತ್ತೇನೆ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌