ಮಂಡ್ಯದಲ್ಲಿ 6 ಸ್ಥಾನ ಗೆದ್ದಿದ್ದಕ್ಕೆ ಹೊಟ್ಟೆಕಿಚ್ಚು: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

Published : Aug 08, 2023, 04:45 AM IST
ಮಂಡ್ಯದಲ್ಲಿ 6 ಸ್ಥಾನ ಗೆದ್ದಿದ್ದಕ್ಕೆ ಹೊಟ್ಟೆಕಿಚ್ಚು: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ಸಾರಾಂಶ

‘ನಾವು ಮಂಡ್ಯದಲ್ಲಿ ಏಳಕ್ಕೆ ಆರು ಸ್ಥಾನ ಗೆದ್ದಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೊಟ್ಟೆಕಿಚ್ಚು ಹಾಗೂ ಅಸೂಯೆಗೆ ಮದ್ದಿಲ್ಲ. ನಮ್ಮ ಬಗ್ಗೆ ಏನೇನು ಆರೋಪ ಮಾಡಿದ್ದಾರೋ ಎಲ್ಲವನ್ನೂ ತನಿಖೆ ಮಾಡೋಣ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಆ.08): ‘ನಾವು ಮಂಡ್ಯದಲ್ಲಿ ಏಳಕ್ಕೆ ಆರು ಸ್ಥಾನ ಗೆದ್ದಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೊಟ್ಟೆಕಿಚ್ಚು ಹಾಗೂ ಅಸೂಯೆಗೆ ಮದ್ದಿಲ್ಲ. ನಮ್ಮ ಬಗ್ಗೆ ಏನೇನು ಆರೋಪ ಮಾಡಿದ್ದಾರೋ ಎಲ್ಲವನ್ನೂ ತನಿಖೆ ಮಾಡೋಣ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ.

ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿರುವ ಪತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಮಂಡ್ಯದಲ್ಲಿ ಆರು ಸ್ಥಾನ ಗೆದ್ದಿರುವುದಕ್ಕೆ ಸಹಿಸಿಕೊಳ್ಳಲಾಗುತ್ತಿಲ್ಲ. ಅಸೂಯೆಗೆ ಮದ್ದಿಲ್ಲ’ ಎಂದು ಹೇಳಿದರು. ಅಧಿಕಾರಿಗಳು ಏನು ಪತ್ರ ಬರೆದಿದ್ದಾರೋ ನನಗೆ ಗೊತ್ತಿಲ್ಲ. ಬರೆದಿದ್ದಾರೋ ಇಲ್ಲವೋ ಕೂಡ ಗೊತ್ತಿಲ್ಲ. ನಮ್ಮ ಮೇಲೆ ಅವರು ಬೇರೆ ಬೇರೆ ಆರೋಪಗಳನ್ನು ಮಾಡುತ್ತಿದ್ದಾರೆ. ಎಲ್ಲವನ್ನೂ ತನಿಖೆ ಮಾಡಿಸೋಣ ಎಂದರು.

ಅವಕಾಶ ಸಿಕ್ಕರೆ ಪುತ್ರ ಸುನಿಲ್‌ ಚಾ.ನಗರದಿಂದ ಸ್ಪರ್ಧೆ: ಸಚಿವ ಮಹದೇವಪ್ಪ

ಮಲ್ಲೇಶ್ವರ, ರಾಜರಾಜೇಶ್ವರಿನಗರದಲ್ಲಿ ಬಿಲ್‌ ಆಗುತ್ತಿಲ್ಲ. ಆ ಬಗ್ಗೆ ನಮಗೂ ಜವಾಬ್ದಾರಿ ಇದೆ. ಮಾಜಿ ಸಚಿವ ಅಶ್ವತ್ಥನಾರಾಯಣ್‌ ಅವರು ಈ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದ್ದರು. ಮುನಿರತ್ನ ಹಾಗೂ ತಮ್ಮ ಕ್ಷೇತ್ರದ ಬಗ್ಗೆ ತನಿಖೆಗೆ ಆಗ್ರಹಿಸಿದ್ದರು. ಅವರ ನುಡಿಮುತ್ತುಗಳ್ನು ನಾವು ಕೇಳಬೇಕಲ್ಲ. ಬೇರೆ ಕಡೆಯಲ್ಲಿ ಬಿಲ್‌ ಆಗುವುದಕ್ಕೆ ಮೂರು ವರ್ಷ ಆಗಬೇಕು. ಇಲ್ಲಿ 15, 20 ದಿನಕ್ಕೆಲ್ಲಾ ಬಿಲ್‌ ಮಾಡಿದ್ದಾರೆ. ಇವೆಲ್ಲಾ ಹೇಗಾಗಿದೆ ಎಂಬುದು ಗೊತ್ತಾಗಬೇಕಲ್ಲ. ಹೀಗಾಗಿ ಕಾಮಗಾರಿಗಳ ಪರಿಶೀಲನೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಹಿಂದೆ ಅಶ್ವತ್ಥನಾರಾಯಣ್‌ ಅವರು ಬಿಲ್‌ ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ವಿಧಾನಸಭೆಯಲ್ಲೂ ಮಾತನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು. 15 ದಿನಗಳಿಗೆ ಬಿಲ್‌ ನೀಡಲು ಆಗುತ್ತದೆಯೇ? ಒಂದು ತಿಂಗಳಲ್ಲೇ ಕೆಲಸ ಮುಗಿಸಲು ಸಾಧ್ಯವೇ? ಒಂದು ವೇಳೆ ಇಂತಹವುಗಳಿಗೆಲ್ಲಾ ಬಿಲ್‌ ನೀಡಿದರೆ ಅವರು ಮುಂದೆ ನಮ್ಮ ಮೇಲೆ ದೂರು ಕೊಡಬಹುದಲ್ಲ. ಹೀಗಾಗಿ ಗುತ್ತಿಗೆದಾರರ ನೈಜ ಕೆಲಸಕ್ಕೆ ಬಿಲ್‌ ನೀಡುತ್ತೇವೆ ಎಂದು ತಿರುಗೇಟು ನೀಡಿದರು.

ಮೋದಿ ಬಂದ ಮೇಲೆ ರೈಲ್ವೆ ಇಲಾಖೆ ಚಿತ್ರಣ ಬದಲು: ಪ್ರಲ್ಹಾದ್‌ ಜೋಶಿ

ಸ್ಪಂದನಾ ಸಾವಿಗೆ ಡಿಕೆಶಿ ಸಂತಾಪ: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ತಂದೆ, ಕುಟುಂಬ ಸದಸ್ಯರೆಲ್ಲರೂ ನನಗೆ ಗೊತ್ತು. ಸ್ಪಂದನಾ ಅವರಿಗೆ ಚಿಕ್ಕ ವಯಸ್ಸಿನಲ್ಲೇ ಹೀಗೆ ಆಗಿದ್ದಕ್ಕೆ ದುಃಖ ಇದೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಡಿ.ಕೆ. ಶಿವಕುಮಾರ್‌ ಪ್ರಾರ್ಥಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ