ಜೆಡಿಎಸ್‌ ನಾಯಕರು ಗೋಡಂಬಿ, ದ್ರಾಕ್ಷಿ ತಿನ್ನಲು ಬಂದಿದ್ದರಾ?: ಡಿ.ಕೆ.ಶಿವಕುಮಾರ್‌

Published : Jul 17, 2024, 09:01 AM IST
ಜೆಡಿಎಸ್‌ ನಾಯಕರು ಗೋಡಂಬಿ, ದ್ರಾಕ್ಷಿ ತಿನ್ನಲು ಬಂದಿದ್ದರಾ?: ಡಿ.ಕೆ.ಶಿವಕುಮಾರ್‌

ಸಾರಾಂಶ

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸರ್ಕಾರ ನಡೆಸಿದ ಸರ್ವ ಪಕ್ಷ ಸಭೆ ಕುರಿತು ವ್ಯಂಗ್ಯವಾಡಿದ್ದ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಕುಮಾರಸ್ವಾಮಿ ಅವರಿಗೆ ಹಿಟ್‌ ಆ್ಯಂಡ್‌ ರನ್‌ ಮಾಡುವುದು ಬಿಟ್ಟರೆ ಕಾವೇರಿ ನೀರು, ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.  

ಬೆಂಗಳೂರು (ಜು.17): ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸಿನೆಮಾ ಶೈಲಿಯಲ್ಲಿ ಮಾತನಾಡುತ್ತಾರೆ. ಸರ್ವ ಪಕ್ಷ ಸಭೆ ಬಗ್ಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಹೋಗಬೇಕಾ ಎಂದು ವ್ಯಂಗ್ಯವಾಡಿರುವ ಕುಮಾರಸ್ವಾಮಿ ಅವರು, ತಮ್ಮ ಪಕ್ಷದ ನಾಯಕರನ್ನು ಸಭೆಗೆ ಕಳುಹಿಸಿದ್ದು ಗೋಡಂಬಿ, ದ್ರಾಕ್ಷಿ ತಿನ್ನಲಿಕ್ಕಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಸರ್ಕಾರ ನಡೆಸಿದ ಸರ್ವ ಪಕ್ಷ ಸಭೆ ಕುರಿತು ವ್ಯಂಗ್ಯವಾಡಿದ್ದ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರಿಗೆ ಹಿಟ್‌ ಆ್ಯಂಡ್‌ ರನ್‌ ಮಾಡುವುದು ಬಿಟ್ಟರೆ ಕಾವೇರಿ ನೀರು, ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರು ನನ್ನ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿರುವುದಕ್ಕೆ ಅಸೂಯೆಯೇ ಕಾರಣ. ಮೊದಲಿನಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬನ್ನಿ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಅಧಿವೇಶನದಲ್ಲಿ ಚರ್ಚೆಗೆ ಕರೆದಾಗಲೂ ಅವರು ಬರಲಿಲ್ಲ ಎಂದರು.

ಗೂಂಡಾ ವರ್ತನೆ, ಟಾರ್ಗೆಟ್ ರಾಜಕಾರಣ ಕಾಂಗ್ರೆಸ್ ಸಂಸ್ಕೃತಿ: ನಿಖಿಲ್ ಕುಮಾರಸ್ವಾಮಿ

ನಾನು ಯಾವುದೇ ತಪ್ಪು ಮಾಡಿಲ್ಲ: ತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಪ್ರಕರಣವನ್ನು ಈಗಾಗಲೇ ಲೋಕಾಯುಕ್ತ ಸಂಸ್ಥೆಗೆ ನೀಡಲಾಗಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆದರೂ, ಸಿಬಿಐ ತಮ್ಮ ವ್ಯಾಪ್ತಿ ಮೀರಿ ಪ್ರಕರಣದ ತನಿಖೆ ನಡೆಸಲು ಮುಂದಾಗಿರುವುದು ಏಕೆ ಎಂಬುದು ತಿಳಿದಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆಪಿಸಿಸಿ ಶಿಸ್ತು ಉಲ್ಲಂಘನೆ: ಸಚಿವ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!
ಮುಂದಿನ ಟಾರ್ಗೆಟ್ ವದಂತಿಗೆ ಜಮೀರ್ ಅಹ್ಮದ್ ಖಾನ್ ಉತ್ತರ: ನಾನು ಪಕ್ಷದ ಸೇವಕ, ದೆಹಲಿಗೆ ಹೋಗಲ್ಲ!