ರಾಮನಗರದಿಂದ ಬೆಳೆದವರು ಈಗ ಜಿಲ್ಲೆಯಲ್ಲೇ ಇಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಗರಂ..!

Published : Jul 27, 2024, 10:09 PM ISTUpdated : Jul 29, 2024, 02:00 PM IST
ರಾಮನಗರದಿಂದ ಬೆಳೆದವರು ಈಗ ಜಿಲ್ಲೆಯಲ್ಲೇ ಇಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಗರಂ..!

ಸಾರಾಂಶ

ನಾವು ಮಾತ್ರ ನಮ್ಮ ಕೆಂಪೇಗೌಡರು ಕಟ್ಟಿದ ಬೆಂಗಳೂರಿನಿಂದ ದೂರ ಏಕೆ ಉಳಿಯಬೇಕು?. ನಮ್ಮೂರಿನ ಅನೇಕರು ಊರು ಬಿಟ್ಟು ಬೆಂಗಳೂರು ಸೇರಿದ್ದಾರೆ. ಅಂತಹವರು ತಮ್ಮೂರಿನಲ್ಲೇ ಬದುಕುಬೇಕು ಎಂಬುದು ನಮ್ಮ ಉದ್ದೇಶ. ಕುಮಾರಸ್ವಾಮಿ ಮಾತ್ರ ತಮ್ಮ ಹೆಸರಿನ ಹಿಂದೆ ತಮ್ಮ ಊರಿನ ಹೆಸರು ಸೇರಿಸಿಕೊಂಡಿದ್ದಾರೆ. ನಾವುಗಳು ಸೇರಿಸಿಕೊಳ್ಳುವುದರಲ್ಲಿ ತಪ್ಪೇನು?: ಡಿಸಿಎಂ ಡಿ.ಕೆ.ಶಿವಕುಮಾರ್‌   

ರಾಮನಗರ(ಜು.27):  ನಾವು ಬೆಂಗಳೂರಿನವರು‌‌, ಕನಕಪುರ ಲೋಕಸಭಾ ಕ್ಷೇತ್ರದಲ್ಲಿನ ನಾವುಗಳು ಈಗ ಬೆಂಗಳೂರು ಲೋಕಸಭಾ ಕ್ಷೇತ್ರದಲ್ಲಿದ್ದೆವೆ. ನಮ್ಮೂರಿನ ಹೆಸರುಗಳನ್ನು ಬದಲಿಸಿದವರು ಇದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ನಮ್ಮತನವನ್ನು ಬದಲಿಸಿದವರು ನಾವಲ್ಲ ಎಂದು ಟೀಕಿಸಿದರು. ದೇವೇಗೌಡರ ಪೂರ್ಣ ಹೆಸರು ಎಚ್.ಡಿ.ದೇವೇಗೌಡ ಎಂಬುದನ್ನು ಮರೆಯಬಾರದು. ತಮ್ಮ ಹೆಸರಿನ ಹಿಂದೆ ತಮ್ಮಗಳ ಊರಿನ ಹೆಸರನ್ನು ಸೇರಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. 

ಇಂದು(ಶನಿವಾರ) ಕನಕಪುರದ ತಾಲೂಕು ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ನಾವು ಮಾತ್ರ ನಮ್ಮ ಕೆಂಪೇಗೌಡರು ಕಟ್ಟಿದ ಬೆಂಗಳೂರಿನಿಂದ ದೂರ ಏಕೆ ಉಳಿಯಬೇಕು?. ನಮ್ಮೂರಿನ ಅನೇಕರು ಊರು ಬಿಟ್ಟು ಬೆಂಗಳೂರು ಸೇರಿದ್ದಾರೆ. ಅಂತಹವರು ತಮ್ಮೂರಿನಲ್ಲೇ ಬದುಕುಬೇಕು ಎಂಬುದು ನಮ್ಮ ಉದ್ದೇಶ. ಕುಮಾರಸ್ವಾಮಿ ಮಾತ್ರ ತಮ್ಮ ಹೆಸರಿನ ಹಿಂದೆ ತಮ್ಮ ಊರಿನ ಹೆಸರು ಸೇರಿಸಿಕೊಂಡಿದ್ದಾರೆ. ನಾವುಗಳು ಸೇರಿಸಿಕೊಳ್ಳುವುದರಲ್ಲಿ ತಪ್ಪೇನು? ಎಂದು ಹೇಳಿದ್ದಾರೆ. 

ಬೆಂಗಳೂರು ಸೌಥ್ ಅಂತ ಮಾಡಿದ್ದಾರೆ, ಅದ್ರಲ್ಲಿ‌ ತಪ್ಪೇನು?: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

ರಾಮನಗರ ಈ ಹಿಂದೆ ಕ್ಲೋಸ್ ಪೇಟೆಯಾಗಿತ್ತು. ಈಗ ರಾಮನಗರ ಜಿಲ್ಲಾ ಕೇಂದ್ರ ಸ್ಥಳವಾಗಿದೆ. ಆದರೆ, ಜಿಲ್ಲೆಯ ಹೆಸರನ್ನಷ್ಟೆ ಬದಲಿಸಿದ್ದೆವೆ. ಇದು ಅಂತಾರಾಷ್ಟ್ರೀಯ ಮಾನ್ಯತೆಗೆ ದಾರಿಯಾಗಲಿದೆ. ಹೀಗಾಗಿ ಟೀಕಿಸುವವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ. ನಮ್ಮ ಜಿಲ್ಲೆಯಿಂದ ಬೆಳೆದವರು ಈಗ ಜಿಲ್ಲೆಯಲ್ಲಿಲ್ಲ. ರಾಮನಗರ ಹೆಸರನ್ನು ತೆಗೆದವರು ಸರ್ವನಾಶ ಎಂದು ದೆಹಲಿಯಲ್ಲಿ ಹೇಳಿದ್ದಾರೆ. ನಮ್ಮ ಸಿಎಂ ಸೇರಿ ಮೂವತ್ತಕ್ಕೂ ಹೆಚ್ಚು ಶಾಸಕರು ಹೆಸರು ಬದಲಾವಣೆಗೆ ಒಪ್ಪಿಗೆ ನೀಡಿದ್ದಾರೆ. ಹಾಗಾದರೆ ಇಡೀ ಸರ್ಕಾರವೇ ಸರ್ವನಾಶ ವಾಗಬೇಕೆ.? ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕೆಂಡ ಕಾರಿದ್ದಾರೆ. 

ಮಾಧ್ಯಮಗಳಿಗೆ ಜಿಲ್ಲಾ ಹಾಗೂ ತಾಲೂಕು ಕಚೇರಿಯೇ ಇಲ್ಲ‌. ಕುಮಾರಸ್ವಾಮಿ ಅವರ ಇಡೀ ಕುಟುಂಬವೇ ಜಿಲ್ಲೆಯಲ್ಲಿ ಆಡಳಿತ ಮಾಡಿದ್ದಾರೆ. ಹೀಗಿದ್ದರೂ ಮಾಧ್ಯಮಗಳಿಗೆ ಒಂದು ಕಚೇರಿ ನೀಡಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್