ಚನ್ನಪಟ್ಟಣ ಉಪಚುನಾವಣೆ: ನಾನೇ ಅಭ್ಯರ್ಥಿ, ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ, ಡಿಕೆಶಿ

Published : Oct 04, 2024, 05:04 PM IST
ಚನ್ನಪಟ್ಟಣ ಉಪಚುನಾವಣೆ: ನಾನೇ ಅಭ್ಯರ್ಥಿ, ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ, ಡಿಕೆಶಿ

ಸಾರಾಂಶ

ನಮ್ಮ ಪಾರ್ಟಿಯಲ್ಲಿ ಒಂದು ಪಾಲಿಸಿ ಇದೇ. ಎಲ್ಲರಿಗೂ ನ್ಯಾಯ ಒದಗಿಸಲಾಗುವುದು. ನಾನು - ಸಿದ್ದರಾಮಯ್ಯನವರು, ಮತ್ತೆ ಕೆಲವರು ಕುಳಿತು ಮಾತನಾಡುತ್ತೇವೆ. ಇದರಲ್ಲಿ ಗೊಂದಲ ಮಾಡಿಕೊಳ್ಳುವ ಸಂದರ್ಭ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ 

ಚನ್ನಪಟ್ಟಣ(ಅ.04):  ಹಲವು ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಚನ್ನಪಟ್ಟಣಕ್ಕೆ 300 ಕೋಟಿ ಅನುದಾನ ಬಂದಿದೆ. 5 ಸಾವಿರ ಮನೆಗಳನ್ನ ತಂದಿದ್ದೇವೆ. ಪ್ರತಿ ಪಂಚಾಯತಿಗೆ 2-6 ಕೋಟಿ ಅನುದಾನ ತಂದಿದ್ದೇವೆ. ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಬಗ್ಗೆ ಯೋಚನೆ ಮಾಡ್ತಿಲ್ಲ. ಅಭಿವೃದ್ಧಿ ಬಗ್ಗೆ ಚಿಂತನೆ‌ ಮಾಡ್ತಿದ್ದೇವೆ. ಇಲ್ಲಿ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಅದು ಅವರ ಖಾಸಗಿ ವಿಚಾರ. ಅದರಲ್ಲಿ ನಾನು ಬಾಯಿ ಹಾಕಲು ಇಷ್ಟವಿಲ್ಲ ಎಂದಷ್ಟೇ ಹೇಳಿದ್ದಾರೆ. 

ದೂರು ಕೊಟ್ಟಿದ್ದಾಯ್ತು, ತನಿಖೆ ಮುಗಿಯೋವರೆಗೆ ಸುಮ್ಮನಿರು: ಸ್ನೇಹಮಯಿ ಕೃಷ್ಣಗೆ ಡಿಕೆ ಸುರೇಶ ಸಲಹೆ

ಜಾತಿಗಣತಿ ಜಾರಿ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ವಿರೋಧ ವಿಚಾರದ ಬಗ್ಗೆ ಮಾತನಾಡಿ ಸಹೋದರನ‌ ಮಾತಿಗೆ ಡಿಕೆಶಿ ಧ್ವನಿಗೂಡಿಸಿದ್ದಾರೆ. ನಮ್ಮ ಪಾರ್ಟಿಯಲ್ಲಿ ಒಂದು ಪಾಲಿಸಿ ಇದೇ. ಎಲ್ಲರಿಗೂ ನ್ಯಾಯ ಒದಗಿಸಲಾಗುವುದು. ನಾನು - ಸಿದ್ದರಾಮಯ್ಯನವರು, ಮತ್ತೆ ಕೆಲವರು ಕುಳಿತು ಮಾತನಾಡುತ್ತೇವೆ. ಇದರಲ್ಲಿ ಗೊಂದಲ ಮಾಡಿಕೊಳ್ಳುವ ಸಂದರ್ಭ ಇಲ್ಲ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ