ಆಪರೇಷನ್‌ ತೆಲಂಗಾಣಕ್ಕೆ ಧಾವಿಸಿದ ಡಿಕೆಶಿ ಟೀಮ್‌..!

Published : Dec 03, 2023, 04:31 AM IST
ಆಪರೇಷನ್‌ ತೆಲಂಗಾಣಕ್ಕೆ ಧಾವಿಸಿದ ಡಿಕೆಶಿ ಟೀಮ್‌..!

ಸಾರಾಂಶ

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಪಾಲಿನ ಟ್ರಬಲ್ ಶೂಟರ್‌ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 

ಬೆಂಗಳೂರು(ಡಿ.04):  ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು(ಭಾನುವಾರ) ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ನಿಭಾಯಿಸಲು ನಿನ್ನೆ(ಶನಿವಾರ)ಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಲಂಗಾಣಕ್ಕೆ ತೆರಳಲಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಒಂದೊಮ್ಮೆ ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಪಾಲಿನ ಟ್ರಬಲ್ ಶೂಟರ್‌ ಡಿ.ಕೆ. ಶಿವಕುಮಾರ್ ತೆರಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದ ಫಲಿತಾಂಶ ಕಾಂಗ್ರೆಸ್‌ ಪಾಲಿಗೆ ಮಹತ್ವದ್ದಾಗಿದೆ.

ಪಂಚ ರಾಜ್ಯ ಚುನಾವಣಾ ಫಲಿತಾಂಶ ಕುತೂಹಲ, ನಿಜವಾಗುತ್ತಾ ಮತಗಟ್ಟೆ ಸಮೀಕ್ಷೆ ವರದಿ?

ಶೇ.70.60 ರಷ್ಟು ಮತದಾನ ದಾಖಲಾಗಿರುವುದರಿಂದ ಕಾಂಗ್ರೆಸ್ ಅಥವಾ ಬಿಆರ್‌ಎಸ್‌ ಯಾವ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ ಎಂಬ ಕಾತುರ ಉಂಟಾಗಿದೆ. ಫಲಿತಾಂಶದ ಬಳಿಕ ಡಿ.ಕೆ. ಶಿವಕುಮಾರ್‌ ಯಾವ ನಡೆಗಳನ್ನು ಅನುಸರಿಸಲಿದ್ದಾರೆ ಎಂಬುದು ಸಹ ಕುತೂಹಲ ಹೆಚ್ಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!