ವಕೀಲರ ಸಮಾವೇಶದಿಂದ ದೂರ ಸರಿದ ಡಿ.ಕೆ.ಶಿವಕುಮಾರ್: ಯಾಕೆ ಗೊತ್ತಾ?

Published : Aug 09, 2023, 11:18 AM IST
ವಕೀಲರ ಸಮಾವೇಶದಿಂದ ದೂರ ಸರಿದ ಡಿ.ಕೆ.ಶಿವಕುಮಾರ್: ಯಾಕೆ ಗೊತ್ತಾ?

ಸಾರಾಂಶ

ಕರ್ನಾಟಕ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ವತಿಯಿಂದ ಮೈಸೂರಿನಲ್ಲಿ ಆ.12ರಂದು ನಡೆಯಲಿರುವ ವಕೀಲರ ರಾಜ್ಯಮಟ್ಟದ ಹತ್ತನೇ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅತಿಥಿಯಾಗಿ ಭಾಗವಹಿಸಿ ಸುಪ್ರಿಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಕಾರ್ಯಕ್ರಮದಿಂದ ಡಿ.ಕೆ.ಶಿವಕುಮಾರ್‌ ಹಿಂದೆ ಸರಿದಿದ್ದಾರೆ.

ಬೆಂಗಳೂರು (ಆ.09): ಕರ್ನಾಟಕ ರಾಜ್ಯ ವಕೀಲರ ಪರಿಷತ್‌ (ಕೆಎಸ್‌ಬಿಸಿ) ವತಿಯಿಂದ ಮೈಸೂರಿನಲ್ಲಿ ಆ.12ರಂದು ನಡೆಯಲಿರುವ ವಕೀಲರ ರಾಜ್ಯಮಟ್ಟದ ಹತ್ತನೇ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅತಿಥಿಯಾಗಿ ಭಾಗವಹಿಸಿ ಸುಪ್ರಿಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ವಿಚಾರ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಕಾರ್ಯಕ್ರಮದಿಂದ ಡಿ.ಕೆ.ಶಿವಕುಮಾರ್‌ ಹಿಂದೆ ಸರಿದಿದ್ದಾರೆ.

ವಕೀಲರ ಪರಿಷತ್‌ ನೂತನ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್‌ ಅವರ ಹೆಸರು ಕೈಬಿಡಲಾಗಿದೆ. ಉಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ, ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಸೇರಿದಂತೆ ಇತರೆ ಗಣ್ಯರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ.

3177 ಕೋಟಿ ವೆಚ್ಚದಲ್ಲಿ 318 ಮೆಟ್ರೋ ಬೋಗಿ ನಿರ್ಮಾಣದ ಗುತ್ತಿಗೆ ಬೆಮೆಲ್‌ಗೆ

ಸುರೇಶ್‌ ಕುಮಾರ್‌ ವಿರೋಧಿಸಿದ್ದರು: ಈ ಹಿಂದೆ ಡಿ.ಕೆ.ಶಿವಕುಮಾರ್‌ ಅವರ ಹೆಸರನ್ನು ಮುಖ್ಯ ಅತಿಥಿ ಎಂದು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರಿತ್ತು. ಆದರೆ, ಸೋಮವಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ಪತ್ರ ಬರೆದಿದ್ದ ಶಾಸಕ ಸುರೇಶ್‌ ಕುಮಾರ್‌, ‘ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್‌ ಅವರು ವಕೀಲರ ಪರಿಷತ್‌ ಸಮಾವೇಶದಲ್ಲಿ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ನ್ಯಾಯಮೂರ್ತಿಗಳ ಜೊತೆ ವೇದಿಕೆ ಹಂಚಿಕೊಳ್ಳುವುದು ನ್ಯಾಯಸಮ್ಮತವೇ?’ ಎಂದು ಪ್ರಶ್ನಿಸಿದ್ದರು.

ಎನ್‌ಆರ್‌ಐ ಫೋರಂಗೆ ಬಲ ತುಂಬಲು ಅನಿವಾಸಿ ಕನ್ನಡಿಗರ ಆಗ್ರಹ

ಅದಕ್ಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಡಿ.ಕೆ.ಶಿವಕುಮಾರ್‌, ‘ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ವಿರುದ್ಧವೂ ನ್ಯಾಯಾಲಯದಲ್ಲಿ ಪ್ರಕರಣಗಳು ಇಲ್ಲವೇ? ಹಾಗಿದ್ದರೂ ಅವರು ನ್ಯಾಯಾಂಗ ಕಾರ್ಯಕ್ರಮಗಳಲ್ಲಿ ಭಾಗಿಯಾಗಿಲ್ಲವೇ? ಸುರೇಶ್‌ ಕುಮಾರ್‌ ಅವರು ಯಡಿಯೂರಪ್ಪನವರ ಬಗ್ಗೆಯೂ ಮಾತನಾಡಬೇಕು ಎಂದರು. ಅವರ ಮೇಲೆ ಎಷ್ಟು ಪ್ರಕರಣಗಳಿವೆ. ಅವರು ಹಿಂದೆ ನ್ಯಾಯಾಂಗ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೋ, ಇಲ್ಲವೋ? ಅದರ ಬಗ್ಗೆ ಮಾತನಾಡಲಿ. ನಾನು ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುತ್ತೇನೆ. ವ್ಯಕ್ತಿಯಾಗಿ ಅಲ್ಲ. ಡಿಸಿಎಂ ಆಗಿ ಸಭೆಗೆ ಹೋಗುವೆ’ ಎಂದು ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!