'ಸಿದ್ದರಾಮಯ್ಯ ಹತಾಶಯದಿಂದ ಏನೇನೋ ಹೇಳುತ್ತಿದ್ದಾರೆ'

Suvarna News   | Asianet News
Published : Nov 01, 2020, 02:45 PM ISTUpdated : Nov 01, 2020, 03:19 PM IST
'ಸಿದ್ದರಾಮಯ್ಯ ಹತಾಶಯದಿಂದ ಏನೇನೋ ಹೇಳುತ್ತಿದ್ದಾರೆ'

ಸಾರಾಂಶ

ನಮಗೆ ಯಾರನ್ನು ಕರೆತರುವ ಅವಶ್ಯಕತೆಯಿಲ್ಲ. ನಮ್ಮ ಪಕ್ಷ ಬೆಳೆಯಬೇಕು, ನಮ್ಮ ಪಕ್ಷ ನಿಂತ ನೀರಲ್ಲ ಹರಿಯುವ ನೀರಾಗಿದೆ ಎಂದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 

ಬಾಗಲಕೋಟೆ(ನ.01): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತಾಶಯದಿಂದ ಹೇಳುತ್ತಿದ್ದಾರೆ. ಕಾಂಗ್ರೆಸ್‌  ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಭಯದಿಂದ, ಬಿಜೆಪಿ ನಂಬಿ ಹೋದವರಿಗೆ ಮಂತ್ರಿಗಿರಿ ಸಿಗಲ್ಲ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು ಪಕ್ಷ ತೊರೆಯುವುದನ್ನ ತಡೆಗಟ್ಟಲು ಈ ರೀತಿ ಹೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟಿದ್ದಾರೆ. 

"

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಯಾರನ್ನು ಕರೆತರುವ ಅವಶ್ಯಕತೆಯಿಲ್ಲ. ನಮ್ಮ ಪಕ್ಷ ಬೆಳೆಯಬೇಕು, ನಮ್ಮ ಪಕ್ಷ ನಿಂತ ನೀರಲ್ಲ ಹರಿಯುವ ನೀರಾಗಿದೆ ಎಂದು ಹೇಳಿದ್ದಾರೆ. 

'ಸಿದ್ದರಾಮಯ್ಯಗೆ ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ'

ರಾಜ್ಯ ಸರ್ಕಾರ ಪತನ ಕಾಂಗ್ರೆಸ್‌ ನಾಯಕ ತನ್ವೀರ್ ಸೇಠ್ ಅವರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ಸಿಗರದು ನರಿ ಕಥೆಯಾಗಿದೆ. ಹೋರಿ ಮುಂದೆ ಹೋಗ್ತಿರುತ್ತೆ, ಅದರ ಗಂಗೆದೊಗಲು ತಿನ್ನೋ ಆಸೆ ಹೋರಿಗಿರುತ್ತೆ, ಹೋರಿ ಮುಂದೆ ಹೋದಂಗ ಅದರ ಗಂಗೆದೊಗಲು ನೆರಳು ಮುಂದೋಗುತ್ತಿಂತೆ. ಹಂಗಾಗೇದ ಕಾಂಗ್ರೆಸ್ಸಿರ ಪರಿಸ್ಥಿತಿ ಎಂದು ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್
ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ: ಎಚ್.ಡಿ.ಕುಮಾರಸ್ವಾಮಿ