
ನವದೆಹಲಿ(ಜೂ.02): ಬಿಜೆಪಿ ಸಂಸದ ಮನೋಜ್ ತಿವಾರಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದು, ಈ ಸ್ಥಾನಕ್ಕೆ ಆದೇಶ್ ಗುಪ್ತಾರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ದೆಹಲಿ ಬಿಜೆಪಿಯಲ್ಲಿ ಮಂಗಳವಾರ ಬಹುದೊಡ್ಡ ಬದಲಾವಣೆಯಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮನೋಜ್ ತಿವಾರಿ ಸ್ಥಾನಕ್ಕೆ, ಆದೇಶ್ ಗುಪ್ತಾರಿಗೆ ಈ ಜವಾಬ್ದಾರಿ ವಹಿಸಿದ್ದಾರೆ. ಇತ್ತ ಛತ್ತೀಸ್ಗಢದಲ್ಲಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯ್ರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ದೆಹಲಿ ರಾಜಕೀಯದಲ್ಲಿ ಆದೇಶ್ ಗುಪ್ತಾ ಹೆಸರು ಅಷ್ಟು ಫೇಮಸ್ ಅಲ್ಲ. ಅವರು ನಾರ್ಥ್ ಎಂಸಿಡಿಯ ಮೇಯರ್ ಆಗಿದ್ದವರು ಹಾಗೂ ಪ್ರಸ್ತುತ ಪಟೇಲ್ ನಗರದ ಕೌನ್ಸಿಲರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟ್ಯೂಷನ್ ಮಾಸ್ಟರ್ ಆಗಿದ್ರು ಆದೇಶ್ ಗುಪ್ತಾ?
ಒಂದು ಸಮಯದಲ್ಲಿ ಮನೆ ನಿರ್ವಹಣೆಗೆ ಟ್ಯೂಷನ್ ಹೇಳಿಕೊಡುತ್ತಿದ್ದ ವ್ಯಕ್ತಿಗೆ ಪಕ್ಷವು ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನ ವಹಿಸಿದೆ. ಇಲ್ಲಿನ ವ್ಯಾಪಾರಿ ವರ್ಗವನ್ನು ಓಲೈಸುವ ಸಲುವಾಗಿ ಗುಪ್ತಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನಲಾಗಿದೆ. ಮೂಲತಃ ಉತ್ತರ ಪ್ರದೇಶದವರಾದ ಆದೇಶ್ ಗುಪ್ತಾ ಛತ್ರಪತಿ ಸಾಹೂಜಿ ಮಾರಾಹಜ್ ವಿಶ್ವವಿದ್ಯಾನಿಲಯ ಕಾನ್ಪುರದಿಂದ 1991ರಲ್ಲಿ ಬಿಎಸ್ಸಿ ಪದವಿ ಗಳಿಸಿದ್ದಾರೆ. ಅವರೊಬ್ಬ ರಾಜಕಾರಣಿ. ಇನ್ನು ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಅವರು ತಮ್ಮ ವಿರುದ್ಧ ಯಾವುದೇ ಅಪರಾಧ ಪ್ರಕರಣವಿಲ್ಲ ಎಂದಿದ್ದರು.
ಕ್ಷಮೆ ಯಾಚಿಸಿದ ತಿವಾರಿ
ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕಳಗಿಳಿಸಿದ ಬಳಿಕ ಮನೋಜ್ ತಿವಾರಿ ಟ್ವೀಟ್ ಒಂದನ್ನು ಮಾಡಿದ್ದು, 3.6ವರ್ಷದಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷನಾಗಿದ್ದ ವೇಳೆ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ದೆಹಲಿಗರು ನೀಡಿದ ಸಹಕಾರಕ್ಕೆ ನಾನು ಚಿರಋಣಿ. ತಿಳಿಯದೆ ತಪ್ಪಾಗಿದ್ದರೆ ನನ್ನನ್ನು ಕ್ಷಮಿಸಿ ಎಂದಿದ್ದಾರೆ. ಅಲ್ಲದೇ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಆದೇಶ್ ಗುಪ್ತಾರಿಗೆ ಶುಭಾಶಯ ಕೋರಿದ್ದಾರೆ.
ದೆಹಲಿ ಚುನಾವಣೆಯಲ್ಲಾದ ಸೋಲೇ ಮನೋಜ್ ತಿವಾರಿಯನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪ್ರಮುಖ ಕಾರಣವೆಂಬ ಮಾತುಗಳು ಕೇಳಿ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.