
ದಾವಣಗೆರೆ, [ಫೆ.24]: ಒಂದಲ್ಲ, ಎರಡಲ್ಲ, ಮೂರು ಬಾರಿ ದಲಿತರು ಸಿಎಂ ಆಗೋ ಚಾನ್ಸ್ ತಪ್ಪಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಇಂದು [ಭಾನುವಾರ] ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ವೇದಿಕೆಯಲ್ಲಿ ಮಾತನಾಡಿದ ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಬಸವಲಿಂಗಪ್ಪ, ರಂಗನಾಥ್ ಅವರಿಗೆ ಕಾಂಗ್ರೆಸ್ ನಾಯಕರೇ ಸಿಎಂ ಆಗುವ ಅವಕಾಶ ತಪ್ಪಿಸಿದರು. ನನಗೂ ಸಿಎಂ ಆಗುವ ಅವಕಾಶ ಮೂರು ಬಾರಿ ತಪ್ಪಿಸಿದ್ದಾರೆ ಎಂದರು.
ನನಗೆ ಅನಿವಾರ್ಯ ಎಂಬಂತೆ ಉಪಮುಖ್ಯಮಂತ್ರಿ ಹುದ್ದೆ ಕೊಟ್ಟಿದ್ದಾರೆ. ನಾವು ಎಲ್ಲವನ್ನು ಹೋರಾಟ ಮಾಡಿಯೇ ಪಡೆಯಬೇಕಾಗಿದೆ ಎಂದು ಹೇಳಿದರು. ಆದ್ರೆ, ಮುಖ್ಯಮಂತ್ರಿ ಸ್ಥಾನವನ್ನು ತಪ್ಪಿಸಿದ್ಯಾರು ಅನ್ನೋದನ್ನು ಮಾತ್ರ ಬಾಯ್ಬಿಡಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.