ಜೆಡಿಎಸ್- ಬಿಜೆಪಿ ಮೈತ್ರಿ: ದೇವದುರ್ಗ ಶಾಸಕಿ ಕರೆಮ್ಮ ಹೇಳಿದ್ದಿಷ್ಟು

Published : Sep 26, 2023, 11:46 AM IST
ಜೆಡಿಎಸ್- ಬಿಜೆಪಿ ಮೈತ್ರಿ: ದೇವದುರ್ಗ ಶಾಸಕಿ ಕರೆಮ್ಮ ಹೇಳಿದ್ದಿಷ್ಟು

ಸಾರಾಂಶ

ಪಕ್ಷದ ತೀರ್ಮಾನಕ್ಕೂ ಸದಾಬದ್ಧವಾಗಿ ಕೆಲಸ ಮಾಡುವೆ. ನನ್ನ ಹೋರಾಟ ಕ್ಷೇತ್ರದಲ್ಲಿ ನಿರಂತರವಾಗಿ ಮುಂದುವರೆಯುತ್ತದೆ. ಕ್ಷೇತ್ರದ ಜನರಿಗೆ ನನ್ನ ಮೊದಲ ಆದ್ಯತೆಯಾಗಿದೆ. ಕ್ಷೇತ್ರದ ಜನರು ತೋರಿಸಿದ ದಾರಿಯಲ್ಲಿ ನಾವು ನಡೆಯುತ್ತೇವೆ. ನನಗೆ ಜೆಡಿಎಸ್ ಪಕ್ಷವೂ ಮುಖ್ಯ. ನನ್ನ ಕ್ಷೇತ್ರದಲ್ಲಿ ಜನರು ಹೇಳಿದಂತೆ ನನ್ನ ತೀರ್ಮಾನ ಆಗಿರುತ್ತೆ ಎಂದ ಶಾಸಕಿ ಕರೆಮ್ಮ 

ರಾಯಚೂರು(ಸೆ.26): ಲೋಕಸಭಾ ಚುನಾವಣೆ ವಿಚಾರಕ್ಕೆ ಮೈತ್ರಿ ಆಗಿದೆ. ಪಕ್ಷದ ಸಿದ್ಧಾಂತ ಮತ್ತು ವರಿಷ್ಠರ ತೀರ್ಮಾನ ಬಿಟ್ಟು ನಾವು ಎರಡನೇ ಮಾತು ಆಡುವುದಿಲ್ಲ ಎಂದು ದೇವದುರ್ಗ ಶಾಸಕಿ ಕರೆಮ್ಮ. ಜಿ.ನಾಯಕ ತಿಳಿಸಿದ್ದಾರೆ. 

ಇಂದು(ಮಂಗಳವಾರ) ಜೆಡಿಎಸ್- ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಮಾಧ್ಯಮದವರಿಗೆ  ಪ್ರತಿಕ್ರಿಯೆ ನೀಡಿದ ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ ಅವರು, ನನ್ನ ಕ್ಷೇತ್ರದ ಬಗ್ಗೆ ನನ್ನ ನೋವು ನಾನು ಹೇಳಿಕೊಂಡಿದ್ದೇನೆ.. ದೇವದುರ್ಗ ಕ್ಷೇತ್ರದ ಸ್ಥಿತಿಗತಿ ಬಗ್ಗೆ ನಿಮಗೆ ಗೊತ್ತು. ನಾನು ದೊಡ್ಡ ಶ್ರೀಮಂತಳು ಅಲ್ಲ. ನಾನು ಯಾವುದೇ ದುಡ್ಡು ಕೊಟ್ಟು ಮತ ತೆಗೆದುಕೊಂಡಿಲ್ಲ. ದೇವದುರ್ಗದ ಜನರು ದುಡ್ಡು ಇರುವವರ ವಿರುದ್ಧ ಓಟು ಮಾಡಿ ನನ್ನನ್ನ ಗೆಲ್ಲಿಸಿದ್ದಾರೆ. ದೇವದುರ್ಗ ‌ಮತದಾರರ ತೀರ್ಮಾನವೇ ನನ್ನ ಅಂತಿಮ ತೀರ್ಮಾನ ಎಂದು ಹೇಳಿದ್ದಾರೆ. 

ರಾಜ್ಯದ ಹಿತಕ್ಕಾಗಿ ಅಲ್ಲ, ವೈಯಕ್ತಿಕ ಲಾಭಕ್ಕೆ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ: ಎನ್‌ಎಸ್ ಬೋಸರಾಜು ವ್ಯಂಗ್ಯ

ಪಕ್ಷದ ತೀರ್ಮಾನಕ್ಕೂ ಸದಾಬದ್ಧವಾಗಿ ಕೆಲಸ ಮಾಡುವೆ. ನನ್ನ ಹೋರಾಟ ಕ್ಷೇತ್ರದಲ್ಲಿ ನಿರಂತರವಾಗಿ ಮುಂದುವರೆಯುತ್ತದೆ. ಕ್ಷೇತ್ರದ ಜನರಿಗೆ ನನ್ನ ಮೊದಲ ಆದ್ಯತೆಯಾಗಿದೆ. ಕ್ಷೇತ್ರದ ಜನರು ತೋರಿಸಿದ ದಾರಿಯಲ್ಲಿ ನಾವು ನಡೆಯುತ್ತೇವೆ. ನನಗೆ ಜೆಡಿಎಸ್ ಪಕ್ಷವೂ ಮುಖ್ಯ. ನನ್ನ ಕ್ಷೇತ್ರದಲ್ಲಿ ಜನರು ಹೇಳಿದಂತೆ ನನ್ನ ತೀರ್ಮಾನ ಆಗಿರುತ್ತೆ ಎಂದ ಶಾಸಕಿ ಕರೆಮ್ಮ ಸ್ಪಷ್ಟಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ
ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್