
ಚಿಂಚೋಳಿ (ಏ.01): ರಾಜ್ಯದಲ್ಲಿ ಬಿಜೆಪಿ ಆಡಳಿತದ ಕಾಲದಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಕಳೆದ ನಾಲ್ಕು ವರ್ಷಗಳಲ್ಲಿ ಕೇವಲ ಒಂದೇ ಒಂದು ಟ್ಯಾಕ್ಸಿ ಮಂಜೂರಿಗೊಳಿಸಿದೆ. ಆದರೆ, ಕಾಂಗ್ರೆಸ್ ಆಡಳಿತದಲ್ಲಿ ೪೦೦ ಟ್ಯಾಕ್ಸಿಗಳನ್ನು ಮಂಜೂರಿಗೊಳಿಸಲಾಗಿತ್ತು. ಅಲ್ಲದೇ ತಾಂಡಾ ಅಭಿವೃದ್ಧಿ ನಿಗಮಕ್ಕೆ ₹೨೫೦ ಕೋಟಿ ಅನುದಾನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ತಾಲೂಕಿನ ದೊಡ್ಡಕೊರವಿ ತಾಂಡಾದಲ್ಲಿ ಕಾಳಿಕಾದೇವಿ ೧೨ನೇ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಲಂಬಾಣಿ ಜನಾಂಗದವರ ಕಲೆ, ಸಾಹಿತ್ಯ ನೀತಿ ಪರಂಪರಿಕೆಯನ್ನುಉಳಿಸುವುದಕ್ಕಾಗಿ ಸಂತ ಸೇವಾಲಾಲ್ ಮಹಾರಾಜರ ಹೆಸರಿನಲ್ಲಿ ಪ್ರಗತಿ ತಾಂಡಾ ಮಾಡಲಾಗಿದೆ. ಪ್ರತಿಯೊಂದು ತಾಂಡಾಕ್ಕೆ ಒಂದು ಕೋಟಿ ರು. ನೀಡಲಾಗಿತ್ತು. ಆದರೆ, ಕಳೆದ ಬಿಜೆಪಿ ಸರ್ಕಾರದಲ್ಲಿ ತಾಂಡಾಗಳ ಅಭಿವೃದ್ಧಿಗೆ ಅನುದಾನವೇ ಕೊಡಲಿಲ್ಲ. ತಾಂಡಾದಲ್ಲಿ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರ ಮತ್ತು ದೇವಸ್ಥಾನ ಬೆಳೆಸುವುದಕ್ಕಾಗಿ ೪೦೦ ದೇವಸ್ಥಾನಗಳನ್ನು ಮಂಜೂರಿಗೊಳಿಸಿ ಪ್ರತಿಯೊಂದು ದೇವಸ್ಥಾನಕ್ಕೆ ₹೨೫ ಲಕ್ಷ ಅನುದಾನ ನೀಡಲಾಗಿದೆ ಎಂದರು.
ನನ್ನ ಸೋಲಿಸಲು ಗ್ರಾಪಂ ಮಟ್ಟದಲ್ಲೂ ಕಾಂಗ್ರೆಸ್ ಷಡ್ಯಂತ್ರ: ಶ್ರೀರಾಮುಲು
ಕಾಂಗ್ರೆಸ್ ಸರ್ಕಾರವು ನೀಡಿದ ಅನುದಾನ ಹಾಗೇ ಉಳಿದುಕೊಂಡಿತ್ತು. ಆಧುನಿಕ ಯುಗದಲ್ಲಿ ಬಂಜಾರ ಸಮುದಾಯದ ಕಲೆ, ಕಸೂತಿ ಉಳಿಸುವುದಕ್ಕಾಗಿ ಹುಮನಾಬಾದ ತಾಲೂಕಿನ ಲಾಲ್ಧರಿ ತಾಂಡಾದಲ್ಲಿ ₹೫೦ ಕೋಟಿ ನೀಡಲಾಗಿದೆ. ಸಂತ ಸೇವಾಲಾಲ್ ಮಹಾರಾಜರ ಜನ್ಮಸ್ಥಳ ಪುಣ್ಯಕ್ಷೇತ್ರದ ಅಭಿವೃದ್ಧಿಗೆ ₹೧೯೦ಕೋಟಿ ಅನುದಾನ ನೀಡಿದ್ದೇವೆ. ಆದರೆ, ಬಿಜೆಪಿ ಮಾಜಿ ಶಾಸಕ ಪಿ. ರಾಜೀವ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ಏನೂ ನೀಡಲಿಲ್ಲ ಇವೆಲ್ಲವೂ ಮಾಡುವಂತೆ ಯಾರೂ ನಮಗೆ ಅರ್ಜಿ ಕೊಟ್ಟಿರಲಿಲ್ಲ ಇವೆಲ್ಲವೂ ಮಂಜೂರಿ ಮಾಡಿ ಅನುದಾನ ನೀಡಿದ್ದರೂ ಬಿಜೆಪಿ ಸರ್ಕಾರದಲ್ಲಿ ಇವೆಲ್ಲವೂ ಯಾಕೆ ಮಾಡಲಿಲ್ಲವೆಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶನಿಸಿದರು.
ಬಂಜಾರ ಸಮುದಾಯವನ್ನು ಮುಖ್ಯವಾಹಿನಿ ತರಲು ಸಾಕಷ್ಟು ಸೌಲಭ್ಯ ನೀಡಲಾಗಿದೆ. ಕಾಂಗ್ರೆಸ್ ಕೆಲಸ ಮಾಡುತ್ತದೆ ಬಿಜೆಪಿಯವರು ಹುಟ್ಟಿದ ಕೂಸಿಗೆ ಹೆಸರಿಡುತ್ತಾರೆ. ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಆಚಾರ, ವಿಚಾರ ಇದೆ. ಆದರೆ ಪ್ರಚಾರ ಇಲ್ಲ. ಸುಭಾಷ ರಾಠೋಡ ಒಳ್ಳೆಯವನಾಗಿದ್ದರೂ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಲಿದೆ. ಜನರ ಆಶೀರ್ವಾದ ಇದ್ದರೆ ಮೇಲೆ ಬರುತ್ತಾರೆ ಜನರ ಆಶೀರ್ವಾದ ನಮ್ಮ ಮೇಲೆ ಇರಲಿ ಎಂದರು.
ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸೋದೆ ನಮ್ಮ ಗುರಿ: ದಿಂಗಾಲೇಶ್ವರ ಶ್ರೀ ಘೋಷಣೆ
ಕಾಂಗ್ರೆಸ್ ಮುಖಂಡ ಸುಭಾಷ ರಾಠೋಡ ಮಾತನಾಡಿ, ಲಂಬಾಣಿ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಿ ನಾಗರಿಕತೆಯನ್ನು ಕೊಟ್ಟಿರುವುದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ದೇವರಾಜ ಅರಸು, ಕೆ.ಟಿ. ರಾಠೋಡ ಪ್ರಯತ್ನದಿಂದಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಮಗೆ ಸಾಮಾಜಿಕ ನ್ಯಾಯ ಸವಲತ್ತುಗಳು ಸಿಕ್ಕಿರುವುದು ಕಾಂಗ್ರೆಸ್ನಿಂದ ಮಾತ್ರವಾಗಿದೆ ಎಂದರು. ವಿಠಲ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ಬಾಬುರಾವ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದಾರ, ಸೈಯದ ಮಹೆಮೂದ ಪಟೇಲ, ಮೇಘರಾಜ ರಾಠೋಡ, ರಾಮಶೆಟ್ಟಿ ಪವಾರ, ಬಸವರಾಜ ಮಲಿ, ರೇವಣಸಿದ್ದ ಕಟ್ಟಿಮನಿ, ಆನಂದ ಟೈಗರ್, ಅಬ್ದುಲ್ ಬಾಸೀತ, ಶಬ್ಬೀರ ಅಹೆಮದ ಸೇರಿ ಹಲವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.