
ಶಿವಮೊಗ್ಗ, (ಡಿ.15): ಇಂದು (ಮಂಗಳವಾರ) ವಿಧಾನಪರಿಷತ್ ಕಲಾಪದಲ್ಲಿ ನಡೆದ ಘಟನೆ ಯಾರಿಗೂ ಶೋಭೆ ತರುವುದಿಲ್ಲ. ಇದೊಂದು ಬೇಸರದ ಘಟನೆ ಎಂದು ವಿಧಾನಪರಿಷತ್ನ ಮಾಜಿ ಸಭಾಪತಿ ಡಿ. ಹೆಚ್. ಶಂಕರಮೂರ್ತಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿರಿಯರ ಸದನದಲ್ಲಿ ಇಂತಹ ಘಟನೆ ನಡೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಈ ಘಟನೆಗೆ ಕಾಂಗ್ರೆಸ್ಸಿಗರೇ ಕಾರಣ. ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.
ಅಧಿಕಾರ ಇಲ್ಲದೆ ಅವರಲ್ಲಿ ಅಸಹನೆ ತುಂಬಿ ತುಳುಕುತ್ತಿದೆ. ಆದರೆ ಈ ರೀತಿಯ ವರ್ತನೆ ತೋರುವುದು ಸರಿಯಲ್ಲ. ಕಾಂಗ್ರೆೆಸ್ ನಾಯಕರು ಅಧಿಕಾರ ನಡೆಸುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದುಕೊಂಡಿದ್ದಾರೆ. ನೆಹರು ಕುಟುಂಬದವರು ಹಾಗೂ ಇತರರು ವಂಶಪಾರಂಪರ್ಯವಾಗಿ ತಾವೇ ಅಧಿಕಾರ ನಡೆಸಬೇಕು ಎಂಬ ಮನೋಭಾವ ಹೊಂದಿದ್ದಾಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ನಾನು ಸಭಾಪತಿಯಾಗಿದ್ದ ಸಂದರ್ಭದಲ್ಲಿ ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡನೆಯಾಗಿತ್ತು. ಆದರೆ ನಾನು ಆಗ ಬಹುಮತ ಸಾಬೀತು ಆಗುವವರೆಗೂ ಕುರ್ಚಿಯ ಮೇಲೆ ಕುಳಿತಿರಲಿಲ್ಲ. ಈಗ ಸಭಾಪತಿಗಳಿಗೆ ಬಹುಮತ ಇಲ್ಲ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇಂತಹ ಸನ್ನಿವೇಶದಲ್ಲಿ ಸಭಾಪತಿಗಳು ನಡೆದುಕೊಂಡ ರೀತಿ ಸರಿಯಲ್ಲ ಎಂದು ಹೇಳಿದರು.
ಸಂಸದೀಯ ನಡವಳಿಕೆಗೆ ರಾಜ್ಯದ ಜನಪ್ರತಿನಿಧಿಗಳು ಮಾದರಿಯಾಗಿದ್ದಾರೆ. ಆದರೆ ಇಂತಹ ಘಟನೆಗಳಿಂದ ರಾಜ್ಯದ ಜನತೆ ರಾಜಕೀಯ ವ್ಯಕ್ತಿಗಳನ್ನು ನೋಡುವ ದೃಷ್ಟಿಕೋನ ಬೇರೆಯದಾಗುತ್ತದೆ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.