ಧರ್ಮಸ್ಥಳ ವಿರುದ್ಧ ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರೆಂದು ಬಯಲಾಗಲಿ: ಬಿ.ವೈ.ವಿಜಯೇಂದ್ರ

Published : Aug 24, 2025, 07:38 AM IST
BY Vijayendra

ಸಾರಾಂಶ

ರಾಜ್ಯ ಸರ್ಕಾರವು ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬೆಂಗಳೂರು (ಆ.24): ರಾಜ್ಯ ಸರ್ಕಾರವು ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ನಾವು ಹೇಳಿದ್ದು ಈಗ ನಿಜವಾಗಿದೆ. ದೂರುದಾರ ಮುಸುಕುಧಾರಿಯ ಬಂಧನ ಸತ್ಯದ ಮೇಲೆ ಬೆಳಕು ಚೆಲ್ಲಿದೆ. ಕಪೋಲ ಕಲ್ಪಿತ ದೂರು ನೀಡಿ ಸಿಕ್ಕಿಬಿದ್ದಿರುವ ಈತನ ಹಿಂದಿರುವ ಶಕ್ತಿಗಳು ಯಾವುದು?

ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರೆಲ್ಲರ ಮುಖವಾಡಗಳು ಬಯಲಾಗಬೇಕು ಎಂದು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಒತ್ತಾಯಿಸಿದ್ದಾರೆ. ಇಡೀ ರಾಜ್ಯದ ಹಾಗೂ ದೇಶದ ಗಮನ ಕೇಂದ್ರೀಕರಿಸುವಂತೆ ಮಾಡಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ಪವಿತ್ರ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಸುದ್ದಿವಾಹಿನಿಗಳಲ್ಲಿ ಬಿತ್ತರಗೊಂಡ ಈ ಅಪಪ್ರಚಾರದ ಹಿಂದೆ ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ ತಳ್ಳಿಹಾಕಲಾಗದು ಎಂದಿದ್ದಾರೆ.

ಪ್ರಕರಣವನ್ನು ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವೆಂದು ಸೀಮಿತಗೊಳಿಸದೆ, ಇದು ಭಾರತೀಯರ ಭಾವನೆಗಳು ಹಾಗೂ ಪರಂಪರೆ ಮೇಲೆ ನಡೆದ ವ್ಯವಸ್ಥಿತ ಪಿತೂರಿ ಎಂದು ಪರಿಗಣಿಸಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಎಡಪಂಥೀಯರ ಒತ್ತಾಯಕ್ಕೆ ಮಣಿದು ಹೇಗೆ ಎಸ್‌ಐಟಿ ರಚಿಸಿ ತನಿಖೆ ನಡೆಸಿತೋ, ಅದೇ ಮಾದರಿಯಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಧರ್ಮಸ್ಥಳ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತೇಜೋವಧೆ ಬಗ್ಗೆ ಆಧಾರ ರಹಿತ ಸುಳ್ಳು ವದಂತಿಗಳ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲದ ವಾತಾವರಣ ಮೂಡಿದೆ ಎಂದರು.

ಎಸ್‌ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದ ಅವರು, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಅವರು ಬಹಿರಂಗಪಡಿಸಿಲ್ಲ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆಯೂ ತನಿಖೆಯಾಗಬೇಕು. ಜತೆಗೆ ದೂರುದಾರನ ಹಿನ್ನೆಲೆ ಹಾಗೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವವರ ಬಗ್ಗೆಯೂ ತನಿಖೆಯಾಗಲಿ ಎಂದು ಆಶಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!