ಕುಂಕುಮದ ಬದಲು ಸಿದ್ದರಾಮಯ್ಯಗೆ ಟೋಪಿ ಹಾಕಿ: ಶಾಸಕ ಬೆಲ್ಲದ ವ್ಯಂಗ್ಯ

Published : Feb 04, 2024, 04:17 AM IST
ಕುಂಕುಮದ ಬದಲು ಸಿದ್ದರಾಮಯ್ಯಗೆ ಟೋಪಿ ಹಾಕಿ: ಶಾಸಕ ಬೆಲ್ಲದ ವ್ಯಂಗ್ಯ

ಸಾರಾಂಶ

ಸಿದ್ದರಾಮಯ್ಯ ಮೊದಲಿನಿಂದಲೂ ಹಿಂದೂ ವಿರೋಧಿ‌. ಓಲೈಕೆ ರಾಜಕಾರಣ ಮಾಡುವ ಉದ್ದೇಶದಿಂದ ಹಿಂದೂ ಆಚರಣೆ ವಿರೋಧಿಸುತ್ತಾರೆ. ಹೀಗಾಗಿ, ಅವರು ಹೋದಲ್ಲೆಲ್ಲ ಕುಂಕುಮ ಹಚ್ಚುವ ಬದಲು ಟೋಪಿ ಹಾಕಿ ಎಂದು ವ್ಯಂಗ್ಯವಾಡಿದ ಶಾಸಕ ಅರವಿಂದ ಬೆಲ್ಲದ

ಹುಬ್ಬಳ್ಳಿ(ಫೆ.04): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣೆಗೆ ಕುಂಕುಮ ಹಂಚಿಕೊಳ್ಳುವುದಿಲ್ಲ. ಹೀಗಾಗಿ, ಅವರು ಎಲ್ಲಿಗೆ ಬಂದರೂ ಅವರ ಹಣೆಗೆ ಕುಂಕುಮ‌ ಹಚ್ಚಬೇಡಿ. ಬದಲಿಗೆ ಟೋಪಿ ಹಾಕಿ ಎಂದು ರಾಜ್ಯದ ಜನರಲ್ಲಿ ಶಾಸಕ ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮೊದಲಿನಿಂದಲೂ ಹಿಂದೂ ವಿರೋಧಿ‌. ಓಲೈಕೆ ರಾಜಕಾರಣ ಮಾಡುವ ಉದ್ದೇಶದಿಂದ ಹಿಂದೂ ಆಚರಣೆ ವಿರೋಧಿಸುತ್ತಾರೆ. ಹೀಗಾಗಿ, ಅವರು ಹೋದಲ್ಲೆಲ್ಲ ಕುಂಕುಮ ಹಚ್ಚುವ ಬದಲು ಟೋಪಿ ಹಾಕಿ ಎಂದು ವ್ಯಂಗ್ಯವಾಡಿದರು. '

ವಿಕಸಿತ ಪ್ರಗತಿಶೀಲ ಭಾರತದ ಬಜೆಟ್‌: ರಮೇಶ ಜಾರಕಿಹೊಳಿ

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಕಾಂಗ್ರೆಸ್ ನಾಯಕರು ದೆಹಲಿ ಚಲೋ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ತಮ್ಮಲ್ಲಿನ ಒಳಜಗಳ, ಭ್ರಷ್ಟಾಚಾರದ ಆರೋಪದಿಂದ ಪಾರಾಗಲು ಜನರ ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ಮೂಲಕ ನಾಯಕರೆಲ್ಲ ತಮ್ಮ ಜೇಬು ತುಂಬಿಸಿಕೊಳ್ಳುತ್ತಿದ್ದಾರೆ. ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೆ ಮಾತ್ರ ಇರಲಿವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!