ಕರ್ನಾಟಕ ಕಾಂಗ್ರೆಸ್‌ಗೆ ಸದ್ದಿಲ್ಲದೆ ಸರ್ಜರಿ; ಇಬ್ಬರಿಗೆ ಮಹತ್ವದ ಜವಾಬ್ದಾರಿ

Published : Jan 20, 2021, 04:38 PM IST
ಕರ್ನಾಟಕ ಕಾಂಗ್ರೆಸ್‌ಗೆ ಸದ್ದಿಲ್ಲದೆ ಸರ್ಜರಿ; ಇಬ್ಬರಿಗೆ ಮಹತ್ವದ ಜವಾಬ್ದಾರಿ

ಸಾರಾಂಶ

ಕರ್ನಾಟಕ ಕಾಂಗ್ರೆಸ್ ಗೆ ಮತ್ತಿಬ್ಬರು ಕಾರ್ಯಾಧ್ಯಕ್ಷರು/  ರಾಮಲಿಂಗಾ ರೆಡ್ಡಿ ಮತ್ತು ಧ್ರುವನಾರಾಯಣ್ ಹೊಸ ಕಾರ್ಯಾಧ್ಯಕ್ಷರು/ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ  ವೇಣುಗೋಪಾಲ್  ರಿಂದ ನೇಮಕ/  ಪಕ್ಷ ಸಂಘಟನೆಗಾಗಿ ಮೇಜರ್ ಸರ್ಜರಿ

ಬೆಂಗಳೂರು ( ಜ.  20)  ಕರ್ನಾಟಕ ಕಾಂಗ್ರೆಸ್ ನಲ್ಲಿ ಸದ್ದಿಲ್ಲದೇ ದೊಡ್ಡದೊಂದು ಬದಲಾವಣೆ ಮಾಡಲಾಗಿದೆ.  ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ  ಮಾಜಿ ಸಚಿವ, ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಗೆ ನಾಯಕರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ  ವೇಣುಗೋಪಾಲ್ ನೇಮಕ ಮಾಡಿದ್ದಾರೆ.

ಮಗನಿಗಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡ್ರಾ ಸುಮಲತಾ?

ಕೆಪಿಸಿಸಿನಲ್ಲಿ ಸತೀಶ್ ಜಾರಕಿಹೊಳಿ, ಸಲೀಂ ಇಬ್ರಾಹಿಂ ಮತ್ತು ಈಶ್ವರ್​ ಖಂಡ್ರೆ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಇದೀಗ ರಾಮಲಿಂಗಾ ರೆಡ್ಡಿ ಹಾಗೂ  ಧ್ರುವ ನಾರಾಯಣ್ ಇನ್ನಿಬ್ಬರು ಹೊಸ ಕಾರ್ಯಾಧ್ಯಕ್ಷರಾಗಿದ್ದಾರೆ.  ಕೆಪಿಸಿಸಿಯನ್ನು ಡಿಕೆ ಶಿವಕುಮಾರ್ ಮುನ್ನಡೆಸುತ್ತಿದ್ದು ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಲು ವಿವಿಧ ಯೋಜನೆ ಹಾಕಿಕೊಳ್ಳಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!