ಮುಸ್ಲಿಮರು ಎಂದಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ?: ಬೆಲ್ಲದ ಪ್ರಶ್ನೆ

Published : Jun 27, 2023, 01:30 PM IST
ಮುಸ್ಲಿಮರು ಎಂದಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ?: ಬೆಲ್ಲದ ಪ್ರಶ್ನೆ

ಸಾರಾಂಶ

ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ: ಶಾಸಕ ಅರವಿಂದ ಬೆಲ್ಲದ 

ಹುಬ್ಬಳ್ಳಿ(ಜೂ.27):  ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ ಬೆಲ್ಲದ ಪ್ರಶ್ನಿಸಿದರು.

ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಮರು ಯಾವತ್ತಿದ್ದರೂ ನಮಗೆ ಮತ ಹಾಕುವುದೇ ಇಲ್ಲ. ಮುಸ್ಲಿಂನ ಕೆಲವು ಒಳಪಂಗಡಗಳು ಪ್ರವರ್ಗ-1, 2ಎ, 2ಬಿ ಅಡಿ ಮೀಸಲಾತಿ ಪಡೆಯುತ್ತಿದ್ದವು. ಒಟ್ಟಾರೆಯಾಗಿ ಅತಿ ಹೆಚ್ಚು ಮೀಸಲಾತಿಯನ್ನು ಮುಸ್ಲಿಮರು ಧರ್ಮದವರು ಪಡೆಯುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ ಎಂದರು.

ವಿದ್ಯುತ್‌ ದರ ಹೆಚ್ಚಳ ಸರ್ಕಾರದ ತಪ್ಪು ನಿರ್ಧಾರ: ಶಾಸಕ ಅರವಿಂದ ಬೆಲ್ಲದ

ಒಳಮೀಸಲಾತಿ ವರ್ಗೀಕರಣ ಹಾಗೂ ಒಕ್ಕಲಿಗ, ವೀರಶೈವ ಲಿಂಗಾಯತದವರಿಗೆ ಮೀಸಲಾತಿ ನೀಡುವ ತೀರ್ಮಾನ 6 ತಿಂಗಳು ಮೊದಲು ಮಾಡಬೇಕಾಗಿತ್ತು. ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಲುಪಿಸಲು ಸಮಯಾವಕಾಶ ದೊರೆಯುತ್ತಿತ್ತು. ಕೊನೆ ಗಳಿಗೆಯಲ್ಲಿ ಮೀಸಲಾತಿ ತೀರ್ಮಾನ ಆಗಿದ್ದರಿಂದ ಜನರಿಗೆ ತಿಳಿಸಲು ಸಾಧ್ಯವಾಗಲಿಲ್ಲ ಎಂದು ಬೆಲ್ಲದ ವಿಶ್ಲೇಷಿಸಿದರು.

ಪರಿಶಿಷ್ಟಪಂಗಡ (ಎಸ್‌ಟಿ) ಸಮುದಾಯಕ್ಕೆ ಇದ್ದ ಶೇ. 3ರ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸುವಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಇದರಿಂದ ಪಕ್ಷಕ್ಕೇನೂ ಲಾಭವಾಗಲಿಲ್ಲ. ಈ ಜನಾಂಗದವರಿಗೆ ಮೀಸಲಾಗಿದ್ದ 16 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿಲ್ಲ. ಇದರ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ