ಚುನಾವಣೆಗೆ ಮೊದಲೇ ₹10000 ನೀಡಿದ್ದಕ್ಕೆ ಏಕೆ ಕ್ರಮವಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

Published : Nov 16, 2025, 12:53 PM IST
Dinesh Gundu Rao

ಸಾರಾಂಶ

ಬಿಹಾರ ಚುನಾವಣೆಯಲ್ಲಿ ಬಿಜೆಪಿಯು ಸರ್ಕಾರದ ದುಡ್ಡಿನಲ್ಲಿ ಮತ ಖರೀದಿ ಮಾಡಿದೆ. ಚುನಾವಣೆ ಘೋಷಣೆಯಾಗಲು 4 ದಿನ ಇದ್ದಾಗ ತಲಾ 10 ಸಾವಿರ ರು. ಹಣವನ್ನು ಮಹಿಳೆಯರ‌ ಅಕೌಂಟ್‌ಗೆ ಹಾಕಿದ್ದಾರೆ.

ಮಂಗಳೂರು (ನ.16): ಬಿಹಾರ ಚುನಾವಣೆಯಲ್ಲಿ ಬಿಜೆಪಿಯು ಸರ್ಕಾರದ ದುಡ್ಡಿನಲ್ಲಿ ಮತ ಖರೀದಿ ಮಾಡಿದೆ. ಚುನಾವಣೆ ಘೋಷಣೆಯಾಗಲು 4 ದಿನ ಇದ್ದಾಗ ತಲಾ 10 ಸಾವಿರ ರು. ಹಣವನ್ನು ಮಹಿಳೆಯರ‌ ಅಕೌಂಟ್‌ಗೆ ಹಾಕಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಓಟು ಖರೀದಿಗೆ ಚುನಾವಣೆ ಆಯೋಗವೂ ಸಹಾಯ ಮಾಡಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತತ್ತು ಸಾವಿರ ರು. ನೀಡಿದರೆ ನ್ಯಾಯಯುತ ಚುನಾವಣೆ ಎಂದು ಹೇಗೆ ಹೇಳಲಾಗುತ್ತದೆ? ಚುನಾವಣೆ ದಿನಾಂಕಕ್ಕೂ ಅವರಿಗೂ ಹೊಂದಾಣಿಕೆ ಮಾಡಿಕೊಂಡು ಹಣ ಹಾಕಿದ್ದಾರೆ. ಓಟು ಖರೀದಿಗೆ ಚುನಾವಣೆ ಆಯೋಗವೇ ಸಹಾಯ ಮಾಡಿದಂತಾಗಿದೆ. ಎಲ್ಲ ರೀತಿಯ ಅಸ್ತ್ರಗಳನ್ನು ಕೇಂದ್ರ ಸರ್ಕಾರ, ಬಿಜೆಪಿ ಉಪಯೋಗಿಸಿದೆ ಎಂದು ದೂರಿದರು.

ಚುನಾವಣಾ ಆಯೋಗ ಕ್ರಮ ಕೈಗೊಳ್ಳದೆ ಹೋದರೆ ಮುಂದೆ ಎಲ್ಲ ಸರ್ಕಾರಗಳು ಇದನ್ನು ಅನುಸರಿಸುತ್ತವೆ. ಚುನಾವಣೆ ಹತ್ತಿರ ಬರುವಾಗ ಹಣ ಕೊಟ್ಟು ತಮಗೆ ವೋಟ್ ಹಾಕಿ ಅಂತಾರೆ. ಆರ್‌ಜೆಡಿ ಜನರಿಗೆ ನೀಡಿದ್ದು ಆಶ್ವಾಸನೆ, ಆದರೆ ಎನ್‌ಡಿಎ ಆಮಿಷ ನೀಡಿದೆ. ಸರ್ಕಾರದ ದುಡ್ಡನ್ನು ಚುನಾವಣೆಗೆ ಬಳಸಿ ಆಮಿಷ ಒಡ್ಡಿದ್ದಾರೆ, ಇದು ಆಕ್ಷೇಪಾರ್ಹ ಎಂದರು. ಅಕ್ಕಪಕ್ಕದ ರಾಜ್ಯಗಳಿಂದ‌ ಬಿಹಾರಕ್ಕೆ ವಿಶೇಷ ಸೌಲಭ್ಯಗಳನ್ನು ಮಾಡಿ‌ ರೈಲು ಕಳುಹಿಸಿಕೊಟ್ಟಿದ್ದಾರೆ, ಈ ರೀತಿ ಎಲ್ಲ ಮಾಡಿದರೆ ಸರಿಯಾ ಎಂದು ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದರು.

ದೆಹಲಿ ಭೇಟಿ ಪೂರ್ವ ನಿಯೋಜಿತ

ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಚುನಾವಣೆಗಳಿಗೆ ವ್ಯತ್ಯಾಸವಿದೆ. ಬಿಜೆಪಿಯವರು ಉತ್ತರ ಭಾರತದಲ್ಲಿ ಹಿಂದುತ್ವದ ಹೆಸರಿನಲ್ಲಿ ವಿಭಜನೆ ಮಾಡಿ ಅದನ್ನು ಚುನಾವಣೆಗೆ ಉಪಯೋಗಿಸುತ್ತಾರೆ. ದಕ್ಷಿಣ ಭಾರತದಲ್ಲಿ ಈ ವಿಭಜನೆ ನಡೆಯಲ್ಲ. ಕರ್ನಾಟಕದಲ್ಲೂ ಬಿಜೆಪಿಗೆ ಈ ವಿಚಾರ ಇಟ್ಟುಕೊಂಡು ಚುನಾವಣೆ ಗೆಲ್ಲಲು ಆಗಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಪೂರ್ವ ನಿಯೋಜಿತ. ಬಿಹಾರ ಚುನಾವಣೆ ಫಲಿತಾಂಶಕ್ಕೂ ಈ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!