ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

Published : Jul 04, 2020, 02:39 PM IST
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಗೆ ಕೊರೋನಾ ಭೀತಿ...!

ಸಾರಾಂಶ

ರಾಜ್ಯದಲ್ಲಿ ದಿನೇ ದಿನೇ ಮಾರಕ ಕೊರೋನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಆತಂಕ ತಂದೊಡ್ಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅವರಿಗೂ ಕೊರೋನಾ ಬಿಸಿ ತಟ್ಟಿದೆ.

ಬೆಂಗಳೂರು, (ಜುಲೈ.04): ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ಅವರ ಭದ್ರತಾ ಸಿಬ್ಬಂದಿಯೊಬ್ಬರಿಗೆ (ಗನ್‌ಮ್ಯಾನ್) ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ.

 ದಿನೇಶ್ ಗುಂಡೂರಾವ್ ಅವರ ಭದ್ರತಾ ಸಿಬ್ಬಂದಿಗೆ ಕೋವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದ್ದು, ವರದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ. ಇದೀಗ ದಿನೇಶ್ ಗುಂಡೂರಾವ್ ಅವರಿಗೂ ಕೊರೋನಾ ಭೀತಿ ಎದುರಾಗಿದೆ.

ಮಾಜಿ ಸಚಿವ ಎಚ್‌ ಡಿ ರೇವಣ್ಣಗೆ ಶುರು ಕೊರೊನಾ ಭೀತಿ

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ದಿನೇಶ್ ಗುಂಡೂರಾವ್,  ನಮ್ಮ ಭದ್ರತಾ ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ನಿನ್ನೆ ಪರೀಕ್ಷೆಗೆ ಒಳಪಟ್ಟಾಗ ಕೊರೋನಾ ಸೋಂಕು ದೃಢಪಟ್ಟಿದೆ.

ನಾನು ಸೇರಿದಂತೆ ನಮ್ಮ ಕುಟುಂಬದ ಎಲ್ಲಾ ಸದಸ್ಯರು ಪರೀಕ್ಷೆಗೆ ಒಳಪಟ್ಟಿದ್ದೇವೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ. ಜೊತೆಗೆ ನಿಗದಿತ ಅವಧಿವರೆಗೂ ಹೋಂ ಕ್ವಾರಂಟೈನ್‍ನಲ್ಲಿರಲಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದಷ್ಟೆ ಅಂದರೆ ಜುಲೈ 2ರಂದು ನಡೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ದಿನೇಶ್ ಗುಂಡುರಾವ್ ಭಾಗವಹಿಸಿದ್ದರು.

ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆಗೆ ಸೇರಿದಂತೆ ಹಲವಾರು ಮುಖಂಡರ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ ಅವರಿಗೆ ಕಾಂಗ್ರೆಸ್ ಬಾವುಟ ಕೊಟ್ಟು ಅಧಿಕಾರ ಹಸ್ತಾಂತರಿಸಿದ್ದರು. ಆ ಕಾರ್ಯಕ್ರಮದಲ್ಲಿ ನೂರಾರು ನಾಯಕರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ