ಮೋದಿ ಕುರಿತ ಟೈಮ್ ಕವರ್ ಪೇಜ್: ಭೇಷ್ ಎಂದ ದಿನೇಶ್ ಗುಂಡೂರಾವ್!

Published : May 11, 2019, 03:54 PM IST
ಮೋದಿ ಕುರಿತ ಟೈಮ್ ಕವರ್ ಪೇಜ್: ಭೇಷ್ ಎಂದ ದಿನೇಶ್ ಗುಂಡೂರಾವ್!

ಸಾರಾಂಶ

ಟೈಮ್ ಮ್ಯಾಗಜಿನ್ ಕವರ್ ಪೇಜ್ ಹೊಗಳಿದ ಕೆಪಿಸಿಸಿ ಅಧ್ಯಕ್ಷ| ಮೋದಿ ಕುರಿತ ಲೇಖನ ಸರಿಯಾಗಿದೆ ಎಂದ ದಿನೇಶ್ ಗುಂಡೂರಾವ್| 'ಕಳೆದ ಐದು ವರ್ಷಗಳಿಂದ ಮೋದಿ ಸುಳ್ಳನ್ನೇ ಹೇಳಿಕೊಂಡು ಬರುತ್ತಿದ್ದಾರೆ'| 'ಮೋದಿ ಜನೆತೆಗೆ ನೀಡಿದ ಯಾವ ಭರವಸೆಯನ್ನೂ ಈಡೇರಿಸಿಲ್ಲ'| ಟೈಮ್ ಮ್ಯಾಗಜಿನ್ ಲೇಖನ ಹೊಗಳಿದ ಗುಂಡೂರಾವ್|

ಬೆಂಗಳೂರು(ಮೇ.11): ಭಾರತದ ಪ್ರಧಾನಿ ನರೇಂದ್ರ ಮೋದಿ ಕುರಿತ ಅಮೆರಿಕದ ಟೈಮ್ ಮ್ಯಾಗಜಿನ್ ಲೇಖನವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾರತದ ಮುಖ್ಯ ವಿಭಜಕ ಎಂಬ ಅಡಿಬರಹದಲ್ಲಿ ಟೈಮ್ ಮ್ಯಾಗಜಿನ್ ತನ್ನ ಮುಖಪುಟವನ್ನು ಮುದ್ರಿಸಿದೆ. ಮೋದಿ ಆಡಳಿತದ ಐದು ವರ್ಷದಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಲೇಖನ ಬರೆಯಲಾಗಿತ್ತು.

ಟೈಮ್ ಮ್ಯಾಗಜಿನ್ ಲೇಖನವನ್ನು ಸ್ವಾಗತಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಟೈಮ್ ಮ್ಯಾಗಜಿನ್ ಲೇಖನ ಅತ್ಯಂತ ಸರಿಯಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಕಳೆದ ಐದು ವರ್ಷಗಳಿಂದ ಕೇವಲ ಸುಳ್ಳನ್ನೇ ಹೇಳಿಕೊಂಡು ಬರುತ್ತಿದ್ದು, ಜನತೆಗೆ ನೀಡಿದ ಒಂದೂ ಭರವಸೆಯನ್ನು ಈಡೇರಿಸಿಲ್ಲ ಎಂದು ಗುಂಡೂರಾವ್ ಟ್ವಿಟ್ ಮಾಡಿದ್ದಾರೆ. ಅಲ್ಲದೇ ಟೈಮ್ ಮ್ಯಾಗಜಿನ್ ಲೇಖನವನ್ನು ಬೆಂಬಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!