ಅತ್ತ ಕಾಂಗ್ರೆಸ್-ಬಿಜೆಪಿ ಟಾರ್ ವಾರ್: ಇತ್ತ ಕುಮಾರಸ್ವಾಮಿಗೆ ಕೋರ್ಟ್ ಬುಲಾವ್

Published : Nov 05, 2019, 08:02 PM IST
ಅತ್ತ ಕಾಂಗ್ರೆಸ್-ಬಿಜೆಪಿ ಟಾರ್ ವಾರ್: ಇತ್ತ ಕುಮಾರಸ್ವಾಮಿಗೆ ಕೋರ್ಟ್ ಬುಲಾವ್

ಸಾರಾಂಶ

ಒಂದು ಕಡೆ ಬಿ.ಎಸ್.ಯಡಿಯೂಪ್ಪನವರ ಆಪರೇಷನ್ ಕಮಲ ಆಡಿಯೋ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಪರಸ್ಪರ ಮಾತಿನ ಸಮರ ತಾರಕಕ್ಕೇರಿವೆ.  ಮತ್ತೊಂದೆಡೆ ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ಪ್ರಕರಣ ಮುನ್ನೆಲೆಗೆ ಬಂದಿದೆ.

ಬೆಂಗಳೂರು, (ನ.5): 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್ ಡಿ ಕುಮಾರಸ್ವಾಮಿ ಅವರು ಹಲಗೆವಡೆರಹಳ್ಳಿಯಲ್ಲಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಕುಮಾರಸ್ವಾಮಿ ಅವರು ಬಿಜೆಪಿ ಜತೆಗೂಡಿ 20-20 ಸರ್ಕಾರ ರಚಿಸಿದ್ದ ವೇಳೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಕುಮಾರಸ್ವಾಮಿಗೆ ಭೂಕಂಟಕ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಇಂದು (ಮಂಗಳವಾರ) ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 12ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಮಾರಸ್ವಾಮಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ 2006ರಲ್ಲಿ ಬೆಂಗಳೂರಿನ ಬನಶಂಕರಿಯ 5ನೇ ಹಂತದಲ್ಲಿರುವ ಹಲಗೆವಡೆರಹಳ್ಳಿಯಲ್ಲಿ 2.24 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. 

ಈ ಬಗ್ಗೆ 2012ರಲ್ಲಿ ಅಧಿಕೃತವಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್