ಲೋಕಸಭೆ ಚುನಾವಣೆ 2024: ಶಿವಮೊಗ್ಗದಿಂದ ಗೀತಾ, ಕಿಮ್ಮನೆ ಸ್ಪರ್ಧೆ ಬಗ್ಗೆ ಚರ್ಚೆ

Published : Aug 18, 2023, 02:30 AM IST
ಲೋಕಸಭೆ ಚುನಾವಣೆ 2024: ಶಿವಮೊಗ್ಗದಿಂದ ಗೀತಾ, ಕಿಮ್ಮನೆ ಸ್ಪರ್ಧೆ ಬಗ್ಗೆ ಚರ್ಚೆ

ಸಾರಾಂಶ

ಮಧು ಬಂಗಾರಪ್ಪ ಅವರ ಸಹೋದರಿಯೂ ಆದ ಗೀತಾ ಶಿವರಾಜ್‌ಕುಮಾರ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ ಮೂರ್ನಾಲ್ಕು ಮಂದಿಯ ಹೆಸರು ಮುಂದಿನ ಲೋಕಸಭೆ ಚುನಾವಣೆಗೆ ಪ್ರಸ್ತಾಪ ಮಾಡಲಾಯಿತು. ಅಂತಿಮವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ. ಸಂಗಮೇಶ್ವರ್‌ ಸೇರಿದಂತೆ ಎಲ್ಲಾ ಶಾಸಕರೂ ಒಟ್ಟಾಗಿ ಕುಳಿತು ಒಮ್ಮತದ ಹೆಸರಿನೊಂದಿಗೆ ಬನ್ನಿ ಎಂದು ಸಿದ್ದರಾಮಯ್ಯ ಅವರು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಬೆಂಗಳೂರು(ಆ.18):  ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಮತ್ತೆ ಗೀತಾ ಶಿವರಾಜ್‌ಕುಮಾರ್‌ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಾಸಕರು, ಪರಿಷತ್‌ ಸದಸ್ಯರ ಸಭೆ ನಡೆಯಿತು.

3 ತಿಂಗಳಲ್ಲೇ ಸಿದ್ದು ಸರ್ಕಾರದ ವರ್ಚಸ್ಸು ಕಡಿಮೆ: ಶಾಸಕ ವಿಜಯೇಂದ್ರ ಟೀಕೆ

ಈ ವೇಳೆ ಮಧು ಬಂಗಾರಪ್ಪ ಅವರ ಸಹೋದರಿಯೂ ಆದ ಗೀತಾ ಶಿವರಾಜ್‌ಕುಮಾರ್‌, ಕಿಮ್ಮನೆ ರತ್ನಾಕರ್‌ ಸೇರಿದಂತೆ ಮೂರ್ನಾಲ್ಕು ಮಂದಿಯ ಹೆಸರು ಮುಂದಿನ ಲೋಕಸಭೆ ಚುನಾವಣೆಗೆ ಪ್ರಸ್ತಾಪ ಮಾಡಲಾಯಿತು. ಅಂತಿಮವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ. ಸಂಗಮೇಶ್ವರ್‌ ಸೇರಿದಂತೆ ಎಲ್ಲಾ ಶಾಸಕರೂ ಒಟ್ಟಾಗಿ ಕುಳಿತು ಒಮ್ಮತದ ಹೆಸರಿನೊಂದಿಗೆ ಬನ್ನಿ ಎಂದು ಸಿದ್ದರಾಮಯ್ಯ ಅವರು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಪಕ್ಷದ ತೀರ್ಮಾನಕ್ಕೆ ಬದ್ಧ:

ಸಭೆ ಬಳಿಕ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧೆ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ, ಶಿವಮೊಗ್ಗ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆಯಾಗಿದೆ. ಆದರೆ ಯಾರು ಸ್ಪರ್ಧಿಸಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಯಾರು ಸ್ಪರ್ಧಿಸಬೇಕು ಎಂಬುದು ಪಕ್ಷದ ತೀರ್ಮಾನ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!