
ಬೆಂಗಳೂರು(ಜ.09): ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ವರಿಷ್ಠರ ಭೇಟಿಗಾಗಿ ದೆಹಲಿ ತಲುಪಿದ್ದಾರೆ. ಸೋಮ ವಾರ ಸಂಜೆ ದೆಹಲಿಗೆ ಪ್ರಯಾಣಿಸಿದ ಅವರು 2 ಅಥವಾ 3 ದಿನ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನಕಾವ್ಯದರ್ಶಿ ಬಿ.ಎಲ್.ಸಂತೋಷ್ರನ್ನು ಭೇಟಿ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಕಾರಣ ರಾದವರ ಬಗ್ಗೆ ದೂರು ನೀಡಲಿದ್ದಾರೆ ಎನ್ನಲಾಗಿದೆ.
ಸೋಮಣ್ಣ ಮುನಿಸು ಶಮನಕ್ಕೆ ದೇವೇಗೌಡ..!
ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ, ಅವರ ಹಿಂದಿರುವವರಿಗೆ ತಾಕೀತು ಮಾಡಬೇಕು ಮತ್ತು ತಮ್ಮ ಸೋಲಿಗೆ ಪರ್ಯಾಯವಾಗಿ ಸೂಕ್ತ ಸ್ಥಾನ ನೀಡಬೇಕು ಎಂಬುದರ ಬಗ್ಗೆ ವರಿಷ್ಠರ ಬಳಿ ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.