
ಬೆಳಗಾವಿ, [ಅ.30]: ನಿನ್ನೆ ಅಷ್ಟೇ [ಮಂಗಳವಾರ] ಬಳ್ಳಾರಿ ನಗರಾಭಿವೃದ್ಧಿ ಅಧ್ಯಕ್ಷರಾನ್ನಾಗಿ ದಮ್ಮೂರ ಶೇಖರ್ ಅವರನ್ನು ನೇಮಕ ಮಾಡಿರುವುದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಅಷ್ಟೇ ಅಲ್ಲದೇ ಬಳ್ಳಾರಿ ಜಿಲ್ಲಾಧ್ಯಕ್ಷ ಸೇರಿದಂತೆ 40ಕ್ಕೂ ಹೆಚ್ಚು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದರು. ಇದೀಗ ಕಾಂಗ್ರೆಸ್ ಗೂ ಸಮೂಹಿಕ ರಾಜೀನಾಮೆ ಬಿಸಿ ತಟ್ಟಿದೆ.
ಬಿಜೆಪಿಗೂ ತಟ್ಟಿದ ಸಾಮೂಹಿಕ ರಾಜೀನಾಮೆ ಶಾಕ್; 48 ಮುಖಂಡರು ಗುಡ್ಬೈ
ಬೆಳಗಾವಿಯ ಗೋಕಾಕ್ ತಾಲೂಕು ಪಂಚಾಯಿತಿಯ 23 ಸದಸ್ಯರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಇವರೆಲ್ಲರೂ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರು ಎಂದು ತಿಳಿದುಬಂದಿದೆ.
ಉಪಚುನಾವಣೆಯ ಸಂದರ್ಭದಲ್ಲಿಯೇ ಸಾಮೂಜಿಕ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಭಾರೀ ಹೊಡೆತ ಬಿದ್ದಂತಾಗಿದೆ. ಇದೇ ಡಿಸೆಂಬರ್ 05ಕ್ಕೆ ಮತದಾನ ನಡೆಯಲಿದ್ದು, ಡಿ.09ಕ್ಕೆ ಫಲಿತಾಂಶ ಹೊರಬೀಳಲಿದೆ.
ಇದಕ್ಕಾಗಿ ಕಾಂಗ್ರೆಸ್ ಲಖನ್ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಆದ್ರೆ, ಅಧಿಕೃತವಾಗಿ ಪ್ರಕಟವಾಗುವುಂದೊಂದೆ ಬಾಕಿ ಇದೆ. ಈಗಾಗಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೆರೆ ಪ್ರವಾಸದ ಜತೆಗೆ ಉಪಚುನಾವಣೆ ಪ್ರಚಾರ ಆರಂಭಿಸಿದ್ದಾರೆ.
ಇದೀಗ ಗೋಕಾಕ್ ತಾಲೂಕು ಪಾಂಚಾಯಿತಿ ಸದಸ್ಯರು ದಿಢೀರ್ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಆರಂಭಿಕ ಆಘಾತವಾಗಿದೆ. ರಾಜೀನಾಮೆ ಬಗ್ಗೆ ಅತ್ತ ಕಾಂಗ್ರೆಸ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅದ್ಯಾವುದು ನನಗೆ ಗೊತ್ತಿಲ್ಲ ಎನ್ನುವ ರೀತಿಯಲ್ಲಿದ್ದಾರೆ.
ಅಕ್ಟೋಬರ್ 30ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.