
ಹೊಸಕೋಟೆ(ಡಿ.09): ಹೊಸಕೋಟೆ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಪಕ್ಷದ ಸಭೆಯಲ್ಲಿ ಶರತ್ ಬೆಂಬಲಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಮೂಲ ಕಾಂಗ್ರೆಸ್ಸಿಗರಿಗೆ ಬೆಲೆ ನೀಡದೇ ತನ್ನ ಬೆಂಬಲಿಗರನ್ನ ನಮ್ಮೇಲೆ ಏರುತ್ತಿದ್ದಾರೆಂದು ಮೂಲ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ.
ಚೇರ್ಗಳನ್ನ ತೆಗೆದುಕೊಂಡು ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ. ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಗಲಾಟೆ ನಡೆದಿದೆ. ಸ್ವಾಭಿಮಾನಿ ಶಾಸಕ ಶರತ್ ಬಚ್ಚೇಗೌಡ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕಲಬುರಗಿ: ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಉಸ್ತುವಾರಿ ಸಚಿವ ನಿರಾಣಿ: ಬಿ.ಆರ್. ಪಾಟೀಲ್
ಇತ್ತೀಚೆಗೆ ಅನುಗೊಂಡನಹಳ್ಳಿ ಪಕ್ಷದ ಕಚೇರಿ ಉದ್ಘಾಟನೆಗೆ ಬ್ಲಾಕ್ ಅಧ್ಯಕ್ಷರ ಗಮನಕ್ಕೆ ತರದೇ ಶಾಸಕ ಶರತ್ ಉದ್ಘಾಟಿಸಿದ್ದಾರೆ ಅಂತ ಆರೋಪಿಸಲಾಗಿದೆ. ಕೆಪಿಸಿಸಿಯಲ್ಲಿ ಈ ಹಿಂದೆ ಇದ್ದ ಮೂಲ ಕಾಂಗ್ರೆಸ್ಸಿಗರನ್ನ ಅವರ ಗಮನಕ್ಕೆ ತರದೇ ಶರತ್ ತಮ್ಮ ಬೆಂಬಲಿಗರಿಗೆ ಸದಸ್ಯತ್ವ ಕೋಡಿಸಿದ್ದಾರೆಂಬ ಮಾಜಿ ಕೆಪಿಸಿಸಿ ಸದಸ್ಯ ಪ್ರಸಾದ್ ಆರೋಪಿಸಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಈ ಭಿನ್ನಮತ ಶರತ್ಗೆ ಮುಳುವಾಗುತ್ತಾ? ಎಂಬ ಚರ್ಚೆಗಳು ಇಡೀಗ ಆರಂಭವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.