ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ತೇಲಿ ಬಂತು ಅಚ್ಚರಿ ಹೆಸರು

Published : Nov 21, 2020, 03:52 PM ISTUpdated : Nov 21, 2020, 05:48 PM IST
ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್‌ನಿಂದ ತೇಲಿ ಬಂತು ಅಚ್ಚರಿ ಹೆಸರು

ಸಾರಾಂಶ

ಬೆಳಗಾವಿ ಲೋಕಸಭಾ ಉಪಚುನಾವಣೆಗ ಇನ್ನೂ ದಿನಾಂಕ ಪ್ರಕಟವಾಗಿಲ್ಲ. ಆಗಲೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಶುರುವಾಗಿದೆ.

ಬೆಳಗಾವಿ, (ನ.21): ಸರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆಗೆ ಉಪಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಿದ್ಧತೆಗಳನ್ನ ನಡೆಸಿದೆ.

"

 ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು  ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೊಂದು ಬೈ ಎಲೆಕ್ಷನ್: ಕೈ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚಿಸಿದ ಡಿಕೆಶಿ

ಅದರಂತೆ ಎಂಬಿ ಪಾಟೀಲ್ ಮೊದಲ ಸುತ್ತಿನಲ್ಲಿ ಜಿಲ್ಲೆಯ ನಾಯಕರುಗಳ ಜತೆ ಸಭೆ ನಡೆಸಿದ್ದು, ಈ ವೇಳೆ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ  ಸತೀಶ್ ಜಾರಕಿಹೊಳಿ‌ ಅವರು ಕಣಕ್ಕಿಳಿಯುವಂತೆ ಜಿಲ್ಲೆಯ ನಾಯಕರು ಒತ್ತಾಯಿಸಿದ್ದಾರೆ. 

ಬೆಳಗಾವಿಯ ಕಾಂಗ್ರೆಸ್ ‌ಭವನದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ಗೆ ಚುನಾಣೆಗೆ ಸ್ಪರ್ಧಿಸುವಂತೆ ಜಿಲ್ಲಾ ಮುಖಂಡರ ಮನವಿ ಮಾಡಿದರು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಣಕ್ಕಿಳಿಯುಲು ರೆಡಿ ಎಂದ ಕೈ ಕಲಿ..!

ಬೆಳಗಾವಿ, ಗೋಕಾಕ, ಸವದತ್ತಿಯಲ್ಲಿ ಸತೀಶ್ ಜಾರಕಿಹೊಳಿ‌ ಅವರಿಗೆ ಹಿಡಿತ ಇದೆ. ಈ ಕಾರಣಕ್ಕೆ ತಾವೇ ಕಣಕ್ಕಿಳಿಯುವಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಫಿರೋಜ್ ಸೇಠ್ ಆಗ್ರಹಿಸಿದ್ದಾರೆ. ಅಲ್ಲದೇ  ಸತೀಶ್ ಒಬ್ಬರ ಹೆಸರನ್ನೇ ಬೆಳಗಾವಿಯಿಂದ ಕೆಪಿಸಿಸಿಗೆ ಕಳಿಸುವಂತೆ ಜಿಲ್ಲಾ ನಾಯಕರು ಎಂಬಿ ಪಾಟೀಲ್ ಬಳಿ ವಿನಂತಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ