ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Published : Jun 04, 2021, 06:18 PM IST
ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಾರಾಂಶ

* ಡಿ.ಕೆ. ಶಿವಕುಮಾರ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ * ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ * ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ  

ದಾವಣಗೆರೆ, (ಜೂನ್.04): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.

 ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.

ಯಥಾ ರಾಜ, ತಥಾ ಅಧಿಕಾರಿ, ಐಎಎಸ್‌ ಅಧಿಕಾರಿಗಳ ಜಟಾಪಟಿಗೆ ಡಿಕೆಶಿ ಟಾಂಗ್

ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಅವರು ಮಧ್ಯಾಹ್ನ ದಾವಣಗೆರೆಯಲ್ಲಿ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದರು.

ಆದರೆ ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಕಾಂಗ್ರೆಸ್ ನಾಯಕರಿದ್ದ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಲಭ್ಯವಾಗಲಿಲ್ಲ.

ಹೀಗಾಗಿ ಶಿವಕುಮಾರ್ ಹಾಗೂ ಸಹೋದ್ಯೋಗಿಗಳಿದ್ದ ಹೆಲಿಕಾಪ್ಟರ್  ನೆಲಮಂಗಲದ ಟಿ. ಬೇಗೂರು ಬಳಿ 4 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಧರೆಗಿಳಿಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ