
ಬೆಂಗಳೂರು (ಮೇ 08): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನದಾಳದ ಸಂಭಾಷಣೆ ಭಾಗ 2ನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ. ಆದರೆ, ಈ ಸಂಭಾಷಣೆಯಲ್ಲಿ ರಾಜ್ಯ ರಾಜಕಾರಣದ ಸ್ಪೋಟಕ ಮಾಹಿತಿ ಚರ್ಚೆ ಮಾಡಿದ್ದಾರೆ. ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಬಗ್ಗೆಯೇ ಜಪ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಸ್ಪೋಟಕ ಮಾಹಿತಿ:
ಸುಮಾರು 100 ವೀರಶೈವ ಲಿಂಗಾಯತ ಸ್ವಾಮೀಜಿಗಳು ಕರೆ ಮಾಡಿದ್ದರು. ನಾವು ಈ ಬಾರಿ ಕಾಂಗ್ರೆಸ್ ಪಾರ್ಟಿಗೆ ಸಹಾಯ ಮಾಡುತ್ತೇವೆ ಎಂದಿದ್ದಾರೆ. ಹಿಂದೆ ಯಡಿಯೂರಪ್ಪ ಅವರಿಗೆ ಅನ್ಯಾಯ ಆಯ್ತು ಹೋಯ್ತು. ಈಗ ಅವರ ಮೇಲೆ ನಂಬಿಕೆ ಹೋಗಿದೆ ಇವರಿಗೆ ವೋಟ್ ಕೇಳಲು ಮರ್ಯಾದೆ ಇಲ್ಲ. ನಾವಂತೂ ಕಾಂಗ್ರೆಸ್ ಗೆ ಆಶೀರ್ವಾದ ಮಾಡುತ್ತೇವೆ ಅಂತ ಹೇಳಿದ್ದಾರೆ. ನಿಮ್ಮ (ಸಿದ್ದರಾಮಯ್ಯ) ಜೊತೆಗೂ ಕೂಡ ಮಾತನಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಹೇಳಿದರು.
ಸಿದ್ದು-ಡಿಕೆಶಿ ಚರ್ಚೆ ವಿಡಿಯೋ ವೈರಲ್: ಕಷ್ಟಸುಖ ಆಲಿಸುತ್ತ ಉಭಯ ನಾಯಕರ ಹರಟೆ
ಲಿಂಗಾಯತ ಸಮಾಜ ಸಮುದ್ರ ಇದ್ದಂತೆ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ಮತದಾನಕ್ಕೆ ಇನ್ನೆರಡೇ ದಿನ ಬಾಕಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಬಹಿರಂಗ ಪ್ರಚಾರವನ್ನು ಮಾಡುತ್ತಿವೆ. ಇನ್ನು ನಾಳೆ ಮನೆ ಮನೆ ಪ್ರಚಾರವನ್ನು ಮಾತ್ರ ಮಾಡಲು ಅವಕಾಶವಿದೆ. ಮೇ 10ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಮೂರು ಪಕ್ಷಗಳಿಂದ ರಾಜ್ಯದಲ್ಲಿ ಸ್ವತಂತ್ರ ಅಧಿಕಾರ ಹಿಡಿಯಬೇಕು ಎಂದು ಕಾದು ಕುಳಿತಿವೆ.ಇನ್ನು ಒಂದು ವಾರದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡಲಿದೆ ಎಂಬ ಸಂಪೂರ್ಣ ಮಾಹಿತಿ ತಿಳಿಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.