ಕಾಂಗ್ರೆಸ್‌ಗೆ ಹೆದರಿ ಮೋದಿ, ಶಾ ರಾಜ್ಯದಲ್ಲಿಯೇ ಮಲಗಿಬಿಟ್ಟಿದ್ದಾರೆ: ಡಿಕೆಶಿ ವಾಗ್ದಾಳಿ

Published : May 06, 2023, 09:52 AM IST
ಕಾಂಗ್ರೆಸ್‌ಗೆ ಹೆದರಿ ಮೋದಿ, ಶಾ ರಾಜ್ಯದಲ್ಲಿಯೇ ಮಲಗಿಬಿಟ್ಟಿದ್ದಾರೆ: ಡಿಕೆಶಿ ವಾಗ್ದಾಳಿ

ಸಾರಾಂಶ

ಬೆಲೆ ಏರಿಕೆಯಿಂದಾಗಿ ಅವರ ಸರಕಾರದ ಡಬಲ್‌ ಎಂಜಿನ್‌ ಸೀಜಾಗಿ ರಿಪೇರಿ ಮಾಡಲಾಗದ ಪರಿಸ್ಥಿತಿಗೆ ತಲುಪಿದೆ. ಈ ಬಾರಿ ಸಿ.ಟಿ.ರವಿ ಸೋಲು ಅನುಭವಿಸುವುದು ಖಚಿತ. ಅವರು ಮಾಜಿ ಶಾಸಕರಾಗುತ್ತಾರೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದರು.

ಮೂಡಿಗೆರೆ (ಮೇ.6) : ಬೆಲೆ ಏರಿಕೆಯಿಂದಾಗಿ ಅವರ ಸರಕಾರದ ಡಬಲ್‌ ಎಂಜಿನ್‌ ಸೀಜಾಗಿ ರಿಪೇರಿ ಮಾಡಲಾಗದ ಪರಿಸ್ಥಿತಿಗೆ ತಲುಪಿದೆ. ಈ ಬಾರಿ ಸಿ.ಟಿ.ರವಿ ಸೋಲು ಅನುಭವಿಸುವುದು ಖಚಿತ. ಅವರು ಮಾಜಿ ಶಾಸಕರಾಗುತ್ತಾರೆಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ಭವಿಷ್ಯ ನುಡಿದರು.

ಶುಕ್ರವಾರ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಯನಾ ಮೋಟಮ್ಮ(Nayana motamma Congress candidate) ಪರವಾಗಿ ಮತಯಾಚನೆಗೆ ಏರ್ಪಡಿಸಿದ್ದ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಒಡೆದ ಮನೆಯಾಗಿದೆ. ಅಭಿವೃದ್ಧಿ ಜತೆಗೆ ಪಕ್ಷಾತೀತವಾಗಿ ರಾಷ್ಟ್ರ ಧ್ವಜ ಹಾಗೂ ಕಾಂಗ್ರೆಸ್‌ ಧ್ವಜ ಹಿಡಿಯಬೇಕೆಂದು ಮುಖ್ಯಮಂತ್ರಿಯಾಗಿದ್ದ ಜಗದೀಶ್‌ ಶೆಟ್ಟರು(Jagadish shettar), ಲಕ್ಷ್ಮಣ್‌ ಸವದಿ(Laxman savadi) ಸೇರಿದಂತೆ ಬಿಜೆಪಿ ಮತ್ತು ದಳದಿಂದ ದಂಡೇ ಕಾಂಗ್ರೆಸ್‌ಗೆ ಬಂದಿದ್ದಾರೆ. ಅದಕ್ಕಾಗಿ ಹೆದರಿ ಪ್ರಧಾನಿ ನರೇಂದ್ರ ಮೋದಿ(Narendra Modi), ಅಮಿತ್‌ ಷಾ(Amit shah) ರಾಜ್ಯದಲ್ಲಿಯೇ ಮಲಗಿಬಿಟ್ಟಿದ್ದಾರೆ. ಕಮಲ ಕೆರೆಯಲ್ಲಿದ್ದರೆ ಚಂದ. ತೆನೆ ಹೊಲದಲ್ಲಿದ್ದರೆ ಚಂದ. ದಾನ ಧರ್ಮ ಮಾಡಿದ ಕೈ ಅಧಿಕಾರದಲ್ಲಿದ್ದರೆ ಚೆಂದ. ಮೂಡಿಗೆರೆ ಕ್ಷೇತ್ರದ ಅಭ್ಯರ್ಥಿ ನಯನಾ ಮೋಟಮ್ಮ ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ದಾನ ಧರ್ಮ ಮಾಡಿದ ಕೈ. ಹಾಗಾಗಿ ಅವರು ಅಧಿಕಾರಕ್ಕೆ ಬರಬೇಕೆಂದು ಹೇಳಿದರು.

Karnataka Politics: ಈ ಬಾರಿ ಪುತ್ರಿಯನ್ನು ಕಣಕ್ಕಿಳಿಸಲು ಮೋಟಮ್ಮ ಕಸರತ್ತು

ಶಾಸಕರಾಗಿದ್ದ ಎಂ.ಪಿ.ಕುಮಾರಸ್ವಾಮಿ(MP Kumaraswamy) ಕಳೆದ 1 ವರ್ಷದಿಂದ ನನ್ನ ಬಾಗಿಲು ತಟ್ಟುತ್ತಿದ್ದರು. ಅವರಿಗೆ ಬಿಜೆಪಿಯಲ್ಲಿಯೇ ಟಿಕೆಟ್‌ ಕೊಟ್ಟಿಲ್ಲ. ಅಲ್ಲದೇ ಕಾಂಗ್ರೆಸ್‌ನಲ್ಲಿಯೇ ಪ್ರಬಲ ವ್ಯಕ್ತಿಗಳಿ ದ್ದಾಗ ನಾನೇಕೆ ಅವರಿಗೆ ಮಣೆ ಹಾಕಬೇಕು? ಎಂದರು

ಮಾಜಿ ಸಭಾಪತಿ ಬಿ.ಎಲ್‌.ಶಂಕರ್‌, ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯಿತ್ರಿ ಶಾಂತೆಗೌಡ, ಕಾಂಗ್ರೆಸ್‌ ಅಭ್ಯರ್ಥಿ ನಯನಾ ಮೋಟಮ್ಮ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಜಿ.ಸುರೇಂದ್ರ ವಹಿಸಿದ್ದರು. ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್‌, ಮುಖಂಡರಾದ ಸಚಿನ್‌ ಮಿಗಾ, ಎಚ್‌.ಎಚ್‌.ದೇವರಾಜು, ಎ.ಎನ್‌.ಮಹೇಶ್‌, ಎಂ.ಪಿ.ಮನು ಮತ್ತಿತರರಿದ್ದರು.

ಬಜರಂಗದಳ ಬ್ಯಾನ್: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌ ನಾಯಕರು!

ಪಪ್ರಚಾರಕ್ಕೆ ತಲೆಕೆಡಿಸಿಕೊಳ್ಳಬೇಡಿ: ಡಿಕೆಶಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿಗೆ 2 ಸಾವಿರ ರು. ಪದವಿ ಮಾಡಿದವರಿಗೆ 3 ಸಾವಿರ, ಒಂದು ಕುಟುಂಬಕ್ಕೆ 10 ಅಕ್ಕಿ, ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಉಚಿತ. 200 ಯುನಿಟ್‌ ವಿದ್ಯುತ್‌ ಉಚಿತ ನೀಡಲಾಗುವುದು. ಇದು ಸುಳ್ಳು ಎಂದು ಅಪಪ್ರಚಾರ ಮಾಡುವ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು. ದೇವರು ವರ ಮತ್ತು ಶಾಪ ಕೊಡುವುದಿಲ್ಲ. ಒಂದು ಬಾರಿ ಅವಕಾಶ ಕೊಡುತ್ತಾನೆ. ಅದನ್ನು ಉಪಯೋಗಿಸಿಕೊಂಡು ಜಿಲ್ಲೆಯಲ್ಲಿ ಹಿಂದೆ ಇಂದಿರಾಗಾಂಧಿ ಅವರ ಕೈಹಿಡಿದಂತೆ ಈ ಬಾರಿಯೂ ಕೂಡ ಜಿಲ್ಲೆಯಲ್ಲಿ 5 ಸ್ಥಾನದ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!