E-Khata ಲಂಚ ಆರೋಪ: ದಾಖಲೆ ಕೊಟ್ಟರೆ ಅಧಿಕಾರಿ ವಿರುದ್ಧ ಕ್ರಮ: ಡಿ.ಕೆ.ಶಿವಕುಮಾರ್‌

Published : Mar 11, 2026, 08:21 PM IST
DK Shivakumar

ಸಾರಾಂಶ

ಇ-ಖಾತಾ ನೀಡುವ ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ದಾಖಲೆ ನೀಡಿದರೆ ಅಂಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ವಿಧಾನಸಭೆ (ಮಾ.11): ಇ-ಖಾತಾ ನೀಡುವ ವಿಚಾರದಲ್ಲಿ ಯಾವುದೇ ಅಧಿಕಾರಿ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ದಾಖಲೆ ನೀಡಿದರೆ ಅಂಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ರಾಜ್ಯ ಬಜೆಟ್‌ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು, ಜನ ತಮ್ಮ ಆಸ್ತಿಗಳ ಇ-ಖಾತಾ ಪಡೆಯಲು ಕನಿಷ್ಠ 10 ಸಾವಿರ ರು. ಲಂಚ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ತಂದಿರುವ ಇ-ಖಾತಾ ವ್ಯವಸ್ಥೆಯಿಂದ ಅಧಿಕಾರಿಗಳಿಗೆ ಲಾಭವಾಗುತ್ತಿದೆ ಎಂದು ಆರೋಪಿಸಿದರು.

ಉತ್ತಮ ಆಡಳಿತದ ಉಪಕ್ರಮ: ಅದಕ್ಕೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ಇ-ಖಾತಾ ವ್ಯವಸ್ಥೆ ಉತ್ತಮ ಆಡಳಿತದ ಉಪಕ್ರಮ ಎಂದು ಕೇಂದ್ರ ಸರ್ಕಾರವೇ ಪ್ರಶಸ್ತಿ ನೀಡಿದೆ. ಈಗ ಆ ವ್ಯವಸ್ಥೆ ಬಗ್ಗೆ ಬಿಜೆಪಿ ಶಾಸಕರೇ ತೆಗಳುತ್ತಿದ್ದೀರಿ. ಬೆಂಗಳೂರಿನಲ್ಲೇ 10 ಲಕ್ಷ ಆಸ್ತಿಗಳಿಗೆ ಇ-ಖಾತಾ ನೀಡಲಾಗಿದೆ. ರಾಜ್ಯದಲ್ಲಿ 1.11 ಕೋಟಿ ಆಸ್ತಿಗಳಿಗೆ ಇ-ಖಾತಾ ನೀಡಲಾಗಿದೆ. ಆಸ್ತಿ ದಾಖಲೆಗಳಲ್ಲಿ ಏನಾದರೂ ಸಮಸ್ಯೆಯಿದ್ದರೆ, ಅರಣ್ಯ ಭೂಮಿ, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೆ ಇ-ಖಾತಾ ಸಿಗುವುದಿಲ್ಲ. ಆದರೂ, ಇ-ಖಾತಾ ವಿತರಣೆಯಲ್ಲಿ ಯಾರಾದರೂ ಲಂಚ ಪಡೆಯುತ್ತಿದ್ದಾರೆ ಎಂದು ಪಟ್ಟಿ ನೀಡಿದರೆ ಸಂಜೆಯೊಳಗೆ ಅಮಾನತು ಮಾಡುವುದಾಗಿ ತಿಳಿಸಿದರು.

ತೀವ್ರ ಅಸಮಾಧಾನ

ಅದಕ್ಕೆ ಅಸಮಧಾನ ವ್ಯಕ್ತಪಡಿಸಿದ ಬಿಜೆಪಿ ಶಾಸಕರು, ನಿಮಗೆ ಸಮಸ್ಯೆಯ ಅರಿವಿಲ್ಲ. ಗ್ರಾಮೀಣ ಭಾಗದಲ್ಲಿ ದಿನವೂ ಹತ್ತಾರು ಮಂದಿ ಇ-ಖಾತಾ ಸಮಸ್ಯೆಗಳನ್ನಿಟ್ಟುಕೊಂಡು ನಮ್ಮ ಬಳಿ ಬರುತ್ತಾರೆ. ಲಂಚ ಕೇಳುತ್ತಿರುವ ಬಗ್ಗೆ ದೂರುತ್ತಾರೆ. ಇದನ್ನು ಸರಿಪಡಿಸಿ ಎಂದರು. ಆಗ ಆರ್‌.ಅಶೋಕ್‌ ಮಧ್ಯಪ್ರವೇಶಿಸಿ, ಡಿ.ಕೆ.ಶಿವಕುಮಾರ್‌ ಅವರು ಕೇವಲ ಬೆಂಗಳೂರು-ದೆಹಲಿ ಎಂದು ಹಾರಾಡುತ್ತಿದ್ದಾರೆ. ಅವರಿಗೆ ತಳಮಟ್ಟದಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿದಿಲ್ಲ.

ನಾನು ಮಾಡುತ್ತಿರುವ ಆರೋಪ ಸುಳ್ಳಾಗಿದ್ದರೆ, ಇ-ಖಾತಾಕ್ಕಾಗಿ ಲಂಚ ಪಡೆಯುತ್ತಿಲ್ಲ ಎಂದಾದರೆ ನನ್ನ ವಿರುದ್ಧ ಹಕ್ಕುಚ್ಯುತಿ ಸೇರಿ ಯಾವುದೇ ಕ್ರಮ ಎದುರಿಸಲು ಸಿದ್ಧನಿದ್ದೇನೆ. ನೀವೇ ಯಾವುದಾದರೂ ಜಾಗ ನಿಗದಿ ಮಾಡಿ ನನ್ನನ್ನು ಕರೆದುಕೊಂಡು ಹೋಗಿ, ಲಂಚ ಪಡೆಯುತ್ತಿರುವ ಬಗ್ಗೆ ಜನರ ಬಳಿ ನಾನು ಹೇಳಿಸುತ್ತೇನೆ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

21 ಜಿಲ್ಲೆಯ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ
ಮಲೆನಾಡು ಜಿಲ್ಲೆಗಳಲ್ಲಿ ರೈತರ ಕೋವಿ ಪರವಾನಗಿ ನೀಡಲು ಸೂಚಿಸ್ತೇನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌