
ಬೆಂಗಳೂರು (ಜು.03): ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಎದೆಯಲ್ಲಿ ಇದ್ದೇನೆ ಎಂದು ತೋರಿಸಿದವರು ಇದ್ದಾರೆ. ಆದರೆ ಕೆಲವರು ದ್ರೋಹ ಬಗೆದರು ಎಂದರು.
MTB ನಾಗರಾಜ್ ಗೆ ಟಿಕೆಟ್ ಕೊಡಿಸಿದ್ದು ನಾನೇ. ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸುವುದಕ್ಕೆ ನಾನು ಒಬ್ಬ ಕಾರಣ. ನನ್ನಿಂದ ಗೆದ್ದ ಅಂತ ಹೇಳೋದಿಲ್ಲ ಆದರೆ ಟಿಕೆಟ್ ಕೊಡಿಸಿದ್ದು ನಾನೇ ಎಂದು ಡಿಕೆಶಿ ಹೇಳಿದರು.
ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ: ಡಿಕೆಶಿಗೆ ಇಬ್ರಾಹಿಂ ಟಾಂಗ್ ...
ಆಮೇಲೆ ಎಂಟಿಬಿ ನಾಗರಾಜ್ ಗೆದ್ದರು. ಆಗ ನನ್ನ ಎದೆಯಲ್ಲಿ ಕಾಂಗ್ರೆಸ್ ಪಕ್ಷ ಇದೆ ಅಂತಿದ್ದರು. ಆಮೇಲೆ ಪಾರ್ಟಿ ಬಿಟ್ಟು ಹೋದರು. ಅದಕ್ಕೆ ನಾವು ಏನು ಮಾಡಲು ಸಾಧ್ಯ ಎಂದು ಎಂಟಿಬಿ ಬಿಜೆಪಿ ಸೇರ್ಪಡೆ ಬಗ್ಗೆ ಡಿಕೆಶಿ ಹೇಳಿದರು.
ಎಂಟಿಬಿ ನಾಗರಾಜ್ ಸೇರಿ 17 ಮಂದಿ ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣವಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.