
ಬೆಂಗಳೂರು, (ಅ.8): ನನ್ನ ಹೆಸರು ಹೇಳಿದರೇ ಬಿಜೆಪಿಯಲ್ಲಿ ಅಧಿಕಾರಗಳು ಸಿಗುತ್ತವೆ. ಆ ಮಾರುಕಟ್ಟೆ ಉದ್ದೇಶಕ್ಕಾಗಿ ಕೆಲವರು ನನ್ನ ಹೆಸರು ಬಳಸಿಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಬಿಜೆಪಿ ಭ್ರಷ್ಟಾಚಾರದ ವಿರುದ್ಧ ರಚಿಸಲಾದ ಹಾಡುಗಳು, ಪೋಸ್ಟರ್ಗಳನ್ನ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭ್ರಷ್ಟ ಎಂಬ ಬಗ್ಗೆ ಬಿಜೆಪಿಯವರ ಬಳಿ ದಾಖಲೆಗಳಿದ್ದರೆ ಜನರ ಮುಂದಿಡಲಿ ಎಂದು ಸವಾಲು ಹಾಕಿದರು.
ಮುನಿರತ್ನ ಅನಗತ್ಯ ಕೇಸು ಹಾಕಿಸಿ ಕಿರುಕುಳ: ಡಿಕೆಶಿ ಕಿಡಿ
ಸಚಿವ ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಈಗ ದೆಹಲಿಗೆ ಹೋಗುತ್ತಿದ್ದಾರೆ. ಅವರು ನನ್ನನ್ನು ಭ್ರಷ್ಟ ತತ್ವಜ್ಞಾನಿಯಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಾನು ಭ್ರಷ್ಟನೋ, ತತ್ವಜ್ಞಾನಿಯೋ ಎಂಬುದು ಬೇರೆ ಮಾತು. ಬಿಜೆಪಿ ನಾಯಕರು ನನ್ನ ಮೇಲೆ ಮಾಡುವ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಗುಡುಗಿದರು,
ನಾನು ಭ್ರಷ್ಟ ಎಂದು ಯಾವ ತನಿಖೆ ನಡೆದಿದೆ, ಯಾವ ಆಯೋಗ ನನ್ನ ವಿರುದ್ಧ ವರದಿ ನೀಡಿದೆ, ಎಷ್ಟು ದೂರುಗಳು ದಾಖಲಾಗಿವೆ ಎಂಬುದನನ್ನು ಬಹಿರಂಗ ಪಡಿಸಲಿ ಎಂದು ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.