
ಬೆಂಗಳೂರು, (ಮೇ.18): ದೇಶದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ ಕೊರೋನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳಿಗೆ ಫುಲ್ ಪವರ್ ನೀಡಿದ್ದಾರೆ. ಪ್ರತಿ ಜಿಲ್ಲೆಯ ಡಿಸಿ ಫೀಲ್ಡ್ ಕಮಾಂಡರ್ನಂತೆ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
"
ಪ್ರಧಾನಿ ಮೋದಿಯ ಈ ಭಾಷಣದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಧಾನಿ ಮೋದಿಗೆ ಬಿಜೆಪಿ ನಾಯಕರು ಕೊರೋನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗ್ತಾರೆ ಎಂಬ ನಂಬಿಕೆ ಇಲ್ಲ. ಹೀಗಾಗಿಯೇ ಡಿಸಿಗಳ ಜೊತೆ ಸಭೆ ನಡೆಸಿ ಅವರಿಗೆ ಅಧಿಕಾರ ನೀಡಿದ್ದಾರೆ ಎಂದು ಟಾಂಗ್ ಕೊಟ್ಟರು.
ಕೋವಿಡ್ ನಿಯಂತ್ರಣಕ್ಕೆ ಡೀಸಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ಹೀಗೆ
ಅಲ್ಲದೇ ಕೊರೊನಾ ವಿಶೇಷ ಪ್ಯಾಕೇಜ್ ಸಂಬಂಧವೂ ಮಾತನಾಡಿದ ಅವರು. ಕಳೆದ ವರ್ಷ ಕೇಂದ್ರ ಸರ್ಕಾರ ಘೋಷಣೆ ಮಾಡಿದ ವಿಶೇಷ ಪ್ಯಾಕೇಜ್ ಇನ್ನೂ ಹಲವರ ಕೈಗೆ ಸಿಕ್ಕಿಲ್ಲ. ನೇಕಾರರು, ಮಡಿವಾಳರು ಸೇರಿದಂತೆ ಹಲವರಿಗೆ ಇನ್ನೂ ಪ್ಯಾಕೇಜ್ನ ಅನುದಾನ ಹಂಚಿಕೆಯಾಗಿಲ್ಲ ಎಂದು ಆರೋಪಿಸಿದರು.
ಕೊರೊನಾ ಸೋಂಕು ಇಡೀ ದೇಶವ್ಯಾಪಿಯಾಗಿ ಕಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ನಾನಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ನಲ್ಲಿ ರಾಜ್ಯದ 17 ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು. ಕೊರೊನಾ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿ. ಸ್ಥಳೀಯವಾಗಿ ಅರ್ಥವಾದರೆ ಅವರಿಗೆ ಧೈರ್ಯ ಬರುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.