ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಮಾತು​ಕ​ತೆ

Published : Sep 01, 2023, 03:20 AM IST
ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಮಾತು​ಕ​ತೆ

ಸಾರಾಂಶ

ಕಾವೇರಿ ನೀರಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ಗೆ ತಮಿ​ಳು​ನಾಡು ಸಲ್ಲಿ​ಸಿ​ರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾ​ರ​ಣೆಗೆ ಬರುವ ಹಿನ್ನೆ​ಲೆ​ಯಲ್ಲಿ ಉಪ ಮುಖ್ಯ​ಮಂತ್ರಿ ಡಿ.ಕೆ.​ಶಿ​ವ​ಕು​ಮಾರ್‌ ಅವರು ಹಿರಿಯ ವಕೀಲ ಮೋಹ​ನ್‌ ಕಾತ​ರಕಿ, ಅಡ್ವೊ​ಕೇಟ್‌ ಜನ​ರಲ್‌ ಶಶಿ​ಕಿ​ರಣ್‌ ಶೆಟ್ಟಿ, ಹೆಚ್ಚು​ವರಿ ಮುಖ್ಯ ಕಾರ್ಯ​ದರ್ಶಿ ರಾಕೇಶ್‌ ಸಿಂಗ್‌ ಅವರ ಜತೆ ದೆಹ​ಲಿ​ಯಲ್ಲಿ ಮಾತು​ಕತೆ ನಡೆ​ಸಿ​ದ್ದಾ​ರೆ. 

ನವದೆಹಲಿ (ಸೆ.01): ಕಾವೇರಿ ನೀರಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ಗೆ ತಮಿ​ಳು​ನಾಡು ಸಲ್ಲಿ​ಸಿ​ರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾ​ರ​ಣೆಗೆ ಬರುವ ಹಿನ್ನೆ​ಲೆ​ಯಲ್ಲಿ ಉಪ ಮುಖ್ಯ​ಮಂತ್ರಿ ಡಿ.ಕೆ.​ಶಿ​ವ​ಕು​ಮಾರ್‌ ಅವರು ಹಿರಿಯ ವಕೀಲ ಮೋಹ​ನ್‌ ಕಾತ​ರಕಿ, ಅಡ್ವೊ​ಕೇಟ್‌ ಜನ​ರಲ್‌ ಶಶಿ​ಕಿ​ರಣ್‌ ಶೆಟ್ಟಿ, ಹೆಚ್ಚು​ವರಿ ಮುಖ್ಯ ಕಾರ್ಯ​ದರ್ಶಿ ರಾಕೇಶ್‌ ಸಿಂಗ್‌ ಅವರ ಜತೆ ದೆಹ​ಲಿ​ಯಲ್ಲಿ ಮಾತು​ಕತೆ ನಡೆ​ಸಿ​ದ್ದಾ​ರೆ. ನಂತರ ಸುದ್ದಿ​ಗಾ​ರರ ಜತೆಗೆ ಮಾತ​ನಾ​ಡಿದ ಡಿ.ಕೆ.​ಶಿ​ವ​ಕು​ಮಾರ್‌, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿ​ಡ​ಬ್ಲ್ಯು​ಎಂಎ​)ದವರು ಕರ್ನಾಟಕದ ಕಾವೇರಿ ನದಿ ಅಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. 

ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ ಎಂದು ತಿಳಿ​ಸಿ​ದ​ರು. ಮೇಕೆ​ದಾಟು ಯೋಜನೆ ಎಲ್ಲಾ ಸಮ​ಸ್ಯೆ​ಗ​ಳಿಗೆ ಪರಿ​ಹಾ​ರ​ವಾ​ಗಿ​ದೆ. ಮೇಕೆದಾಟು ಅಣೆಕಟ್ಟು ಇದ್ದಿದ್ದರೆ ಸಂಕಷ್ಟಸೂತ್ರದ ಮೂಲಕ ತಮಿಳುನಾಡಿಗೆ ನೀರು ಬಿಡಬಹುದಾಗಿತ್ತು. ಮೇಕೆದಾಟು ಯೋಜನೆ ತಮಿಳುನಾಡಿನ ಹಿತ ಕಾಯಲಿದೆ. ಹೀಗಾಗಿ ನಾವು ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸುತ್ತೇವೆ ಎಂದ​ರು. ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮ ಕಡಿಮೆ ನೀರು ಹರಿಸುವ ಆದೇಶ ಸಿಕ್ಕಿದೆ. ಆದರೂ ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ಪ್ರತಿನಿತ್ಯ 5 ಸಾವಿರ ಕ್ಯುಸೆಕ್‌ ನೀರು ಹರಿಸುವುದು ಸವಾಲಿನ ವಿಚಾರ. 

ಸುಪ್ರೀಂಕೋರ್ಟ್​ನಲ್ಲಿ ನಾಳೆ ಕಾವೇರಿ ನೀರು ವಿಚಾರಣೆ ಅನುಮಾನ?: ಯಾಕೆ ಗೊತ್ತಾ!

ಹೀಗಾಗಿ ಕಾವೇರಿ ವಿಚಾರವಾಗಿ ರಾಜ್ಯದ ಪರ ವಾದ ಮಾಡುತ್ತಿರುವ ಅಡ್ವೊ​ಕೇಟ್‌ ಜನರಲ್‌ ಹಾಗೂ ಅವರ ಕಾನೂನು ತಜ್ಞರ ತಂಡ, ಅಧಿಕಾರಿಗಳು, ಕರ್ನಾಟಕ ಪ್ರತಿನಿಧಿಗಳು ಸೇರಿ ಚರ್ಚೆ ಮಾಡಿ​ದ್ದೇ​ವೆ ಎಂದ​ರು. ತಮಿಳುನಾಡಿನವರು 24 ಸಾವಿರ ಕ್ಯುಸೆಕ್‌ ನೀರು ಕೇಳಿದ್ದರು. ನಮ್ಮ ಅಧಿಕಾರಿಗಳು ವಾಸ್ತವಾಂಶಗಳ ದಾಖಲೆ ಮಂಡಿಸಿದ ಪರಿಣಾಮ ತಮಿಳುನಾಡಿಗೆ ಹರಿಸುವ ನೀರಿನ ಪ್ರಮಾಣ 5 ಸಾವಿರ ಕ್ಯುಸೆ​ಕ್‌ಗೆ ಇಳಿ​ಸ​ಲಾ​ಗಿ​ದೆ. ರಾಜ್ಯದಲ್ಲಿ ಮಳೆ ಕೊರತೆ, ಅಣೆಕಟ್ಟುಗಳಿಗೆ ಒಳಹರಿವಿನ ಪ್ರಮಾಣ ಕುಸಿದಿರುವ ಕಾರಣ, ಈ ಪ್ರಮಾಣದಲ್ಲಿ ನೀರು ಬಿಡುವುದು ಕಷ್ಟಕರ. ನಾವು ತಮಿಳುನಾಡಿನ ಹಕ್ಕಿನ ನೀರಿನ ಬಳಕೆ ಬಗ್ಗೆ ನಾವು ಪ್ರಶ್ನಿಸಲು ಸಾಧ್ಯವಿಲ್ಲ ಎಂದ​ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Khalnayak Returns ಬೆನ್ನಲ್ಲೇ ಸಂಜಯ್​ ದತ್​ ಬೆನ್ನೇರಿತು ಕಾಗೆ: ಸಿಎಂ ಸಿದ್ದು ನೆನಪಿಸಿದ ಕನ್ನಡಿಗರು! Video Viral
ಬಿಜೆಪಿಯನ್ನೂ ತೊರೆದ್ರಾ ರಾಘವ್​ ಚಡ್ಡಾ? ಜಾಲತಾಣದಲ್ಲಿ ವೈರಲ್​ ಆಗ್ತಿದೆ ಈ ವಿಡಿಯೋ- ಏನಿದರ ಅಸಲಿಯತ್ತು?