
ಬೆಂಗಳೂರು, (ಜೂನ್.26): ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬಹಿರಂಗ ಹೇಳಿಕೆ ಕಾಂಗ್ರೆಸ್ನಲ್ಲಿ ಕೆಲ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಾರ್ಯಧ್ಯಕ್ಷರ ಜೊತೆ ಸಭೆ ನಡೆಸಿರುವುದು ಭಾರೀ ಕುತೂಹಲ ಮೂಡಿಸಿದೆ.
ಹೌದು... ಇಂದು (ಶನಿವಾರ) ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತಿಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ ಹಾಗೂ ಧೃವನಾರಾಯಣ್ ಜೊತೆ ಸಭೆ ನಡೆಸಿದರು.
ಸಿಎಂ ಕುರ್ಚಿ ದಂಗಲ್: ಸಿದ್ದು ಬಣಕ್ಕೆ ಸಖತ್ ಟಾಂಗ್ ಕೊಟ್ಟ ಡಿಕೆಶಿ
ಪಕ್ಷ ಸಂಘಟನೆಗಾಗಿ ವಿಭಾಗವಾರು ಉಸ್ತುವಾರಿಗಳನ್ನು ನೇಮಿಸುವುದು, ಜಿಲ್ಲೆ, ಬ್ಲಾಕ್ ಮಟ್ಟದಲ್ಲಿ ಸಕ್ರಿಯರಾಗಿಲ್ಲದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಕುರಿತು ಚರ್ಚಿಸಲಾಗಿದೆ. ಅಲ್ಲದೇ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕೆಪಿಸಿಸಿಗೆ ಕಳೆದ ಎರಡು ವರ್ಷಗಳಿಂದ ಪದಾಧಿಕಾರಿಗಳ ನೇಮಕವಾಗಿಲ್ಲ. ಇತ್ತೀಚೆಗೆ ತಾವು ತಯಾರಿಸಿದ್ದ ಪದಾಧಿಕಾರಿಗಳ ಪಟ್ಟಿಯನ್ನು ಡಿ.ಕೆ.ಶಿವಕುಮಾರ್ ದೆಹಲಿಗೆ ತೆಗೆದುಕೊಂಡು ಅನುಮತಿಗಾಗಿ ಹೈಕಮಾಂಡ್ ಗೆ ಸಲ್ಲಿಸಿದ್ದರು. ಆದರೆ ಅದಕ್ಕೆ ಅನುಮತಿ ನೀಡುವ ಬದಲಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಹಿರಿಯ ನಾಯಕರ ಜೊತೆ ಮತ್ತೊಮ್ಮೆ ಸಮಾಲೋಚನೆ ನಡೆಸುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.