
ಬೆಳಗಾವಿ(ಅ.20): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬೆಳಗಾವಿಯಲ್ಲಿ ಏನೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೇನೂ ಆ ಅನುಭವ ಆಗಿಲ್ಲ. ಇನ್ನು ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ಮಧ್ಯೆ ಯಾವುದೇ ರೀತಿಯ ವೈಮನಸ್ಸಿಲ್ಲ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ನಗರದ ಪ್ರವಾಸ ಮಂದಿರದಲ್ಲಿ ವಾಸ್ತವ್ಯ ಹೂಡಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಲು ಆಗಮಿಸಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ ಅವರ ಬೆಳಗಾವಿ ಪ್ರವಾಸ ಪೂರ್ವ ನಿಯೋಜಿತವಾಗಿರಲಿಲ್ಲ. ನಾನು ನನ್ನ ಕ್ಷೇತ್ರದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ. ಅವರು ಬೆಳಗಾವಿಗೆ ಬರುವ ಮೊದಲೇ ನಾನು ಬೆಂಗಳೂರಿನಲ್ಲಿದ್ದೆ ಎಂದು ಸ್ಪಷ್ಟಪಡಿಸಿದರು.
ನನ್ನ, ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇನ್ನು ಡಿಕೆಶಿ ಅವರ ಸ್ವಾಗತಕ್ಕೆ ಗೈರಾಗಿದ್ದರಿಂದ ಪಕ್ಷಕ್ಕೆ ಮುಜುಗರ ಆಯಿತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬೆಳಗ್ಗೆ ಬೆಂಗಳೂರಿನಿಂದ ಬಂದ ತಕ್ಷಣವೇ ಡಿಕೆಶಿ ಅವರ ಭೇಟಿಗೆ ಬಂದಿರುವೆ. ಆ ರೀತಿ ಏನೂ ಇಲ್ಲ. ಇದರಲ್ಲಿ ಯಾವುದೇ ಪೊಲಿಟಿಕಲ್ ಗಿಮಿಕ್ ಇಲ್ಲ ಎಂದರು.
ಕುಸ್ತಿ ನೋಡಲು ಮೈಸೂರಿಗೆ ಜಿಲ್ಲೆಯ ಶಾಸಕರು ಹೋಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಮೈಸೂರಿನಲ್ಲಿ ನಮ್ಮ ಇಬ್ಬರು ಸ್ನೇಹಿತರಿದ್ದಾರೆ. ಅವರು ಹಿಂದಿನ ವರ್ಷವೂ ಔತಣಕೂಟ ಏರ್ಪಡಿಸಿ ನಮ್ಮನ್ನು ಕರೆದಿದ್ದರು, ಆಗಲೂ ಹೋಗಿದ್ದೇವು. ಇನ್ನು ಬಸ್ನಲ್ಲಿ ನಾವು ಹೋಗಿರಲಿಲ್ಲ. ಸುಮ್ಮನೆ ಮಾಧ್ಯಮಗಳು ಏನೇನೋ ಸೃಷ್ಟಿಸುತ್ತಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.