
ಕನಕಪುರ (ನ.25):ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವ ಹೊತ್ತಿನಲ್ಲಿ ಕಾರ್ಯಕರ್ತರು ನಾನು ಮುಖ್ಯಮಂತ್ರಿ ಆಗಬೇಕೆಂದು ಕೂಗು ಹಾಕಿರಬಹುದು. ಆದರೆ, ಅವರು ಮುಖ್ಯಮಂತ್ರಿಯಾಗಬೇಕು, ಇವರು ಮುಖ್ಯಮಂತ್ರಿಯಾಗಬೇಕು ಎಂಬುದೆಲ್ಲ ಇಲ್ಲಿ ಗೌಣ. ನಮ್ಮ ಮೇಲೆ ಜನ ವಿಶ್ವಾಸ ಇಟ್ಟು ಮತ ಹಾಕಿದ್ದಾರೆ. ನಮಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿ, ಸಂಪುಟ ಪುನರ್ ರಚನೆ ಸಾಧ್ಯತೆಯನ್ನೂ ತಳ್ಳಿ ಹಾಕಿದರು. ಸಂಪುಟ ಪುನರ್ ರಚನೆ ಎಲ್ಲ ಸುಳ್ಳು. ಅಂಥದ್ದು ಯಾವುದೂ ಇಲ್ಲ. ಹಾಗೇನಾದರೂ ಇದ್ದರೆ ಮುಖ್ಯಮಂತ್ರಿ ಅವರನ್ನೇ ಕೇಳಬೇಕು ಎಂದರು.
ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಸಹಕಾರದಿಂದಲೇ ನಮಗೆ ಜಯ ಸಿಕ್ಕಿದೆ: ಡಿಕೆಶಿ
ಚನ್ನಪಟ್ಟಣದ ಗೆಲುವಿನ ಕೀರ್ತಿ ಕ್ಷೇತ್ರದ ಮತದಾರರಿಗೆ ಹಾಗೂ ಎಲ್ಲಾ ಕಾರ್ಯಕರ್ತರಿಗೆ ಸೇರಬೇಕು. ಇದರಲ್ಲಿ ನಮ್ಮ ಸಾಧನೆ ಏನೂ ಇಲ್ಲ. ಇದು ಒಬ್ಬರಿಗೆ ಸೇರುವ ಗೆಲುವಲ್ಲ, ಎಲ್ಲರೂ ಸೇರಿ ಶ್ರಮಪಟ್ಟ ಕಾರಣಕ್ಕೆ ಅಭೂತಪೂರ್ವ ಗೆಲುವು ದೊರೆತಿದೆ. ಅಪೂರ್ವ ಸಹೋದರರಿಗೆ ಮಾತ್ರ ಗೆಲುವಿನ ಗರಿಯಲ್ಲ. ನಮ್ಮ ಸರ್ಕಾರ ಅಧಿಕಾರದಲ್ಲಿರುವುದರಿಂದ ಯೋಗೇಶ್ವರ್ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಮತದಾರರು ನಮ್ಮ ಪರ ನಿಂತು ನಮ್ಮ ಮೇಲೆ ವಿಶ್ವಾಸವಿಟ್ಟು ಬೆಂಬಲಿಸಿದ್ದಾರೆ. ಇದಕ್ಕಾಗಿ ಜನರಿಗೆ ಅಭಾರಿಯಾಗಿದ್ದೇನೆ. ಜಿಲ್ಲೆಯನ್ನು ಜೆಡಿಎಸ್ ಮುಕ್ತ ಮಾಡುವುದು ನಮಗೆ ಮುಖ್ಯವಲ್ಲ. 19 ಇದ್ದ ಆ ಪಕ್ಷದ ಶಾಸಕರ ಸಂಖ್ಯೆ 18ಕ್ಕೆ ಇಳಿದಿರುವುದು ಸಮಾಧಾನ ತಂದಿದೆ ಎಂದು ಹೇಳಿದರು.
Shiggaon By Election ಬೊಮ್ಮಾಯಿ ಕುಟುಂಬಕ್ಕೆ ಬೆಂಬಿಡದ ಮೊದಲ ಸೋಲು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.