
ಬೆಂಗಳೂರು, (ಅ.24): ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂತ ನನ್ನ ಮೇಲಿನ ಪ್ರೀತಿ ಹಾಗೂ ಅಭಿಮಾನದಿಂದ ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಾಸಕಿ ಸೌಮ್ಯ ರೆಡ್ಡಿ ಹಾಗೂ ಹನುಂತರಾಯಪ್ಪ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇಂದು (ಶನಿವಾರ) ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡೋದು ಶಾಸಕರು ಹಾಗೂ ಹೈಕಮಾಂಡ್. ಮೊದಲು ನಾವು ಅಧಿಕಾರಕ್ಕೆ ಬರಬೇಕು ಅನ್ನೋದೇ ನನ್ನ ಗುರಿ. ಸಾಮೂಹಿಕ ನಾಯಕತ್ವದಲ್ಲಿ ನನಗೆ ನಂಬಿಕೆ, ವಿಶ್ವಾಸವಿದೆ. ಐ ಬಿಲೀವ್ ಇನ್ ಕಲೆಕ್ವಿವ್ ಲೀಡರ್ ಶಿಪ್ ಎಂದರು.
ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ: ಸರಿಸಮಾನರ ಜೊತೆ ಯುದ್ಧ ಎಂದ ಡಿಕೆಶಿ
ಮುಂದಿನ ಚುನಾವಣೆಯ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗೋದನ್ನ ಯಾರಿಗೂ ತಪ್ಪಿಸಲಾಗಲ್ಲ ಎಂಬ ಜಮೀರ್ ಹೇಳಿಕೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಜಮೀರ್ ಅಹ್ಮದ್ ಖಾನ್ ನನ್ನ ಸ್ನೇಹಿತ ಒಮ್ಮೊಮ್ಮೆ ಎಮೋಷನಲ್ ಆಗಿ ಏನೇನೋ ಹೇಳ್ತಾರೆ ಎಂದು ಜಮೀರ್ ಮಾತನ್ನು ಎಮೋಷನಲ್ ಹೇಳಿಕೆ ಎಂದು ಹೇಳಿದರು.
ಇನ್ನು ಆರ್.ಆರ್ ನಗರ ಚುನಾವಣೆ ಕುರಿತು ಮಾತನಾಡಿದ ಡಿಕೆಶಿ, ಅಕ್ರಮವಾಗಿ ಓಟರ್ ಐಡಿ ಸಂಗ್ರಹಿಸುತ್ತಿರುವ ಪ್ರಕರಣದ ಹಿನ್ನಲೆಯಲ್ಲಿ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಿದ್ದೆವು. ನ್ಯಾಯಾಲಯ ಎಫ್.ಐ.ಆರ್ ದಾಖಲಿಸುವಂತೆ ಸೂಚನೆ ನೀಡಿದೆ. ಅಕ್ರಮಗಳ ಬಗ್ಗೆ ಕೂಡಲೇ ಎಫ್ ಐಆರ್ ದಾಖಲಿಸಬೇಕು ಎಂದಿದೆ. ಆರ್.ಆರ್.ನಗರದಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.