ಸಿಬಿಐ ಕಚೇರಿಗೆ ತೆರಳುವ ಮುನ್ನ ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ

Published : Nov 25, 2020, 03:05 PM ISTUpdated : Nov 25, 2020, 03:15 PM IST
ಸಿಬಿಐ ಕಚೇರಿಗೆ ತೆರಳುವ ಮುನ್ನ ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ

ಸಾರಾಂಶ

ಸಿಬಿಐ ಕಚೇರಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ದರ್ಶನ ಪಡೆದುಕೊಂಡಿದ್ದಾರೆ.ವಿಜಯನಗರ ಪೈಪ್ ಲೈನ್ ರಸ್ತೆಯಲ್ಲಿರುವ ಅಜ್ಜಯ್ಯನ  ಮಠ

ಬೆಂಗಳೂರು, (ನ.25):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನ. 23 ರಂದು ವಿಚಾರಣೆಗೆ ಬರುವಂತೆ  ಸಿಬಿಐ ನೊಟೀಸ್ ನೀಡಿದ್ದು, ಆದ್ರೆ, ಮನವಿ ಮೇರೆಗೆ ಇಂದು (ಬುಧವಾರ) ಬೆಂಗಳೂರಿನಲ್ಲಿರುವ ಸಿಬಿಐ ಕಚೇರಿಗೆ ತೆರಳಿದ್ದಾರೆ.

ಆದ್ರೆ, ಸಿಬಿಐ ಕಚೇರಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ದರ್ಶನ ಪಡೆದುಕೊಂಡಿರುವುದು ವಿಶೇಷ.  ಬೆಂಗಳೂರಿನ ವಿಜಯನಗರ ಪೈಪ್ ಲೈನ್ ರಸ್ತೆಯಲ್ಲಿರುವ ಅಜ್ಜಯ್ಯನ  ಮಠಕ್ಕೆ ಭೇಟಿ ನೀಡಿ ಬಳಿಕ ಸಿಬಿಐ ವಿಚಾರಣೆಗೆ ತೆರಳಿದರು.

'ನನ್ನ ಮಗಳ ನಿಶ್ಚಿತಾರ್ಥ ದಿನವೇ ನೋಟಿಸ್, ನನ್ನೊಬ್ಬನಿಗೆ ಏಕೆ ತೊಂದ್ರೆ'?

ಡಿಕೆ ಶಿವಕುಮಾರ್ ಅವರು ಯವುದೇ ಕೆಲಸಕ್ಕೆ ತೆರಳುವ ಮುನ್ನ  ಅಜ್ಜಯ್ಯನ ದರ್ಶನ ಪಡೆದು ಮುಂದಿನ ಕೆಲಸಕ್ಕೆ ಹೋಗುವ ಅಭ್ಯಾಸ ಇದೆ. ಅದರಂತೆ ಸಿಬಿಐ ಕಚೇರಿಗೆ ವಿಚಾರಣೆಗೆ ತೆರಳುವ ಮುನ್ನ‌ ಅಜಯ್ಯನ ದರ್ಶನ ಪಡೆದುಕೊಂಡರು.

ಮಗಳ ನಿಶ್ಚಿತಾರ್ಥ ದಿನವೇ ಅಂದರೆ ನವೆಂಬರ್ 19ರಂದು ಸಿಬಿಐ ನೋಟಿಸ್ ನೀಡಿದ್ದು, ನ.23ಕ್ಕೆ ವಿಚಾರಣೆ ಬರುವಂತೆ ಸಿಬಿಐ ಹೇಳಿತ್ತು. ಆದ್ರೆ, ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದರಿಂದ ನ.25ರಂದು ಬರುವುದಾಗಿ ಮನವಿ ಮಾಡಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ