
ಬೆಂಗಳೂರು : ‘ಮೀಡಿಯಾ ಹುಲಿ ಎಚ್.ಡಿ.ಕುಮಾರಸ್ವಾಮಿ ಅವರ ಅನುಭವದ ಕಾಲುವೆಯಲ್ಲಿ ಕೇವಲ ಸುಳ್ಳು, ಹಿಟ್ ಆ್ಯಂಡ್ ರನ್, ಅವಕಾಶವಾದ, ಆತ್ಮರತಿ ಎಂಬ ಕೊಚ್ಚೆ ಹರಿಯುತ್ತಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.
‘ಗೃಹ ಸಚಿವರ ಖಾತೆಯನ್ನು ಡಿ.ಕೆ.ಶಿವಕುಮಾರ್ ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಎಕ್ಸ್ ಖಾತೆ ಮೂಲಕವೇ ಡಿ.ಕೆ.ಶಿವಕುಮಾರ್ ಉತ್ತರ ನೀಡಿದ್ದಾರೆ.
ಬಳ್ಳಾರಿ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ ರೆಡ್ಡಿ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ ಎಂದು ಪುಂಗಿದ್ದು, ಅರ್ಜಿ ಹಾಕದಿದ್ದರೂ ಮಂಡ್ಯದಲ್ಲಿ ಕೈಗಾರಿಕೆಗೆ ಜಮೀನು ಕೊಡುತ್ತಿಲ್ಲ ಎಂದು ಆರೋಪ ಮಾಡಿದ್ದು, ಕುಮಾರಸ್ವಾಮಿ ಅವರ ಸುಳ್ಳುಗಳಿಗೆ ಸಣ್ಣ ಉದಾಹರಣೆ. ಪೇಪರ್ ಟೈಗರ್ ಆದ ಕುಮಾರಣ್ಣ ಮಾಧ್ಯಮಗಳ ಮುಂದೆ ರಾಜಕಾರಣ ಮಾಡುವ ಬದಲು, ಪಟಾಲಂ ಕರೆದುಕೊಂಡು ಬಳ್ಳಾರಿಗೆ ಹೋಗಿ ಎರಡು ಬಾರಿ ಮರಣೋತ್ತರ ಪರೀಕ್ಷೆ ಆದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.