ಯೋಗಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಹೇಳಿದ ಡಿಕೆಶಿ

Kannadaprabha News   | Asianet News
Published : May 30, 2021, 09:23 AM IST
ಯೋಗಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಹೇಳಿದ ಡಿಕೆಶಿ

ಸಾರಾಂಶ

ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ಸ್ವಾಭಿಮಾನ ಇದ್ದರೆ ಸಿಎಂ ಕ್ರಮ ಕೈಗೊಳ್ಳಲಿ  - ಡಿಕೆಶಿ ಸಚಿವ ಸಿ.ಪಿ. ಯೋಗೀಶ್ವರ್‌ ಹೆಸರು ಪ್ರಸ್ತಾಪಿಸದೆ ಅಸಮಾಧಾನ

ಬೆಂಗಳೂರು (ಮೇ.30):  ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದಿರುವ ಸಚಿವರ ವಿರುದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೇ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. 

ಇದರ ಆಧಾರದ ಮೇಲೆಯೇ ಎಸಿಬಿ ದೂರು ದಾಖಲಿಸಬಹುದು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮಾನ, ಸ್ವಾಭಿಮಾನ ಇದ್ದರೆ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿ ಕಾರಿದ್ದಾರೆ.

ಯೋಗೇಶ್ವರ್‌ ವಿರುದ್ಧ ಬಿಜೆಪಿಯಲ್ಲಿ ಭಾರೀ ಅಸಮಾಧಾನ : ಕೈ ತಪ್ಪುತ್ತಾ ಸಚಿವ ಸ್ಥಾನ? ...

ಸಚಿವ ಸಿ.ಪಿ. ಯೋಗೀಶ್ವರ್‌ ಹೆಸರು ಪ್ರಸ್ತಾಪಿಸದೆ ಮಾತನಾಡಿದ ಅವರು, ಇವರು ಎಂತಹವರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ (ಎಂ.ಪಿ. ರೇಣುಕಾಚಾರ್ಯ) ಹೇಳಿದ್ದಾರೆ. ಹಿಂದೆ ಲೂಟಿ ಮಾಡಿದ್ದರು ಎಂದೂ ಹೇಳಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹೇಳಿದರೆ ಮುಖ್ಯಮಂತ್ರಿಗಳೇ ಹೇಳಿದಂತೆ. ಅಧಿಕಾರಿಗಳೂ ಸಹ ಶಾಮೀಲಾಗಿದ್ದಾರೆ. ಹೀಗಾಗಿ ದೂರು ದಾಖಲಿಸುತ್ತಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!