ಟಿಕೆಟ್ ಘೋಷಣೆಗೂ ಮುನ್ನ ಕಾಲಭೈರವೇಶ್ವರನ ಮೊರೆ ಹೋದ ಡಿಕೆ ಶಿವಕುಮಾರ

Published : Mar 21, 2023, 11:36 AM IST
ಟಿಕೆಟ್ ಘೋಷಣೆಗೂ ಮುನ್ನ ಕಾಲಭೈರವೇಶ್ವರನ ಮೊರೆ ಹೋದ ಡಿಕೆ ಶಿವಕುಮಾರ

ಸಾರಾಂಶ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಟಿಕೆಟ್ ಘೋಷಣೆಗೆ ಮುನ್ನ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.  ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿರುವ ಕಾಲಭೈರವೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ (ಮಾ.21) : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ . ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಟಿಕೆಟ್ ಘೋಷಣೆಗೆ ಮುನ್ನ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.  ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿರುವ ಕಾಲಭೈರವೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ದತೆ ಮಾಡಿಕೊಂಡಿರುವ ಕಾಂಗ್ರೆಸ್(Congress). ಪಟ್ಟಿ ಬಿಡುಗಡೆಗೆ ಮುನ್ನ ಕಾಲಭೈರವೇಶ್ವರ(KalaBhairaveshwar)ನಿಗೆ ವಿಶೇಷ ಪೂಜೆ ಸಲ್ಲಿಸಿದರೆ ಒಳಿತಾಗುತ್ತೆ ಎಂಬ ನಂಬಿಕೆ. ಹೀಗಾಗಿ ಇಂದು ಅಮಾವಾಸ್ಯೆ ದಿನ ಇರೋದ್ರಿಂದ ಪೂಜೆ ಸಲ್ಲಿಸುತ್ತಿರುವ ಡಿಕೆ ಶಿವಕುಮಾರ.

ಉರಿಗೌಡ-ನಂಜೇಗೌಡ ಹೆಸರಲ್ಲಿ ಬಿಜೆಪಿ ತಪ್ಪು ಸಂದೇಶವನ್ನು ರವಾನಿಸುತ್ತಿದೆ: ಡಿ.ಕೆ.ಶಿವಕುಮಾರ್ ಕಿಡಿ

ಪೂಜೆ ಬಳಿಕ ನಿರ್ಮಾಲಾನಂದನಾಥ(nirmalanandashree swamiji) ಶ್ರೀಗಳ ಜೊತೆ ಡಿಕೆ ಶಿವಕುಮಾರ(DK Shivakumar) ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ಉರಿಗೌಡ, ನಂಜೇಗೌಡ ಕುರಿತು ಮಾತನಾಡಿದ್ದ ಸ್ವಾಮೀಜಿ. ಸಚಿವ ಮುನಿರತ್ನರನ್ನ ಕರೆಸಿಕೊಂಡು ಈ ಬಗ್ಗೆ ಈ ಬಗ್ಗೆ ಮಾತನಾಡದಂತೆ ಚರ್ಚೆ ಮಾಡದಂತೆ ಸೂಚಿಸಿದ್ದ ನಿರ್ಮಲಾನಂದನಾಥ ಶ್ರೀ. ಈ ಬೆಳವಣಿಗೆ ಬೆನ್ನಲ್ಲೇ ಡಿಕೆ ಶಿವಕುಮಾರ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿರುವ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. 

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ರಾಜ್ಯ ದ್ರೋಹಿ ಹೈದರಾಲಿ ಪರ ನಿಂತುಕೊಳ್ತಿದ್ದರು: ಸಿಟಿ ರವಿ ವಾಗ್ದಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!