RR ನಗರ ಬೈ ಎಲೆಎಕ್ಷನ್: ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗಿಸಿ ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆಶಿ

Published : Oct 16, 2020, 06:02 PM IST
RR ನಗರ ಬೈ ಎಲೆಎಕ್ಷನ್:  ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗಿಸಿ ಎಚ್‌ಡಿಕೆಗೆ ಶಾಕ್ ಕೊಟ್ಟ ಡಿಕೆಶಿ

ಸಾರಾಂಶ

ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್, ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗ ಮಾಡುವ ಮೂಲಕ ಎಚ್‌ಡಿ ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಬೆಂಗಳೂರು, ಅ.(16): ಆರ್.ಆರ್.ನಗರ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೂರು ಪಕ್ಷಗಳು ಈ ಕಣವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿವೆ.

ಅದರಲ್ಲೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಜಾತಿ ಪಾರುಪತ್ಯಕ್ಕಾಗಿ ಹೋರಾಟ ಶುರುವಾಗಿದೆ.

RR ನಗರ ರಣಕಣದಲ್ಲಿ ಗೌಡ್ರ ಗದ್ದಲ: ಯಾರಿಗೆ ಒಲಿಯುತ್ತಾಳೆ ರಾಜರಾಜೇಶ್ವರಿ?

ಇದರ ನಡುವೆಯೇ ಡಿಕೆ ಶಿವಕುಮಾರ್, ರಹಸ್ಯವಾಗಿ ಅಪರೇಷನ್ ಹಸ್ತ ಪ್ರಯೋಗ ಮಾಡುವ ಮೂಲಕ ಎಚ್‌ಡಿ ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹೌದು... ಜೆಡಿಎಸ್ ಟಿಕೆಟ್ ಆಕಾಂಕ್ಷಿ, ಆರ್.ಆರ್. ವಿಧಾನಸಭಾ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಸೇರಿದಂತೆ ಇತರೆ ಜೆಡಿಎಸ್ ಪದಾಧಿಕಾರಿಗಳನ್ನ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. 

ಬೆಟ್ಟಸ್ವಾಮಿಗೌಡ ಅವರು ಇಂದು (ಶುಕ್ರವಾರ) ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,  ಜೆಡಿಎಸ್‌ನಲ್ಲಿ ಸಾಕಷ್ಟು ದುಡಿದಿದ್ದೇನೆ. ಆದ್ರೆ ಜೆಡಿಎಸ್ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಲಿಲ್ಲ. ಸೋಲುವ ಅಭ್ಯರ್ಥಿಗಳನ್ನೇ ಜೆಡಿಎಸ್ ಕಣಕ್ಕಿಳಿಸ್ತಿದೆ ಎಂದರು.

ಆರ್.ಆರ್ ನಗರ ಜೆಡಿಎಸ್ ಕಾರ್ಯಕರ್ತರು ನೊಂದಿದ್ದಾರೆ. ನಮಗೆ ಆರ್.ಆರ್ ನಗರದಲ್ಲಿ ಉತ್ತಮ ಶಾಸಕರು ಬೇಕು. ಹೀಗಾಗಿ ಕಾಂಗ್ರೆಸ್ ಸೇರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ
ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ