ತಮ್ಮದೇ ಪಕ್ಷದ ಮಾಜಿ ಶಾಸಕರೊಬ್ಬರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆ ಶಿವಕುಮಾರ್

Published : Mar 11, 2022, 03:59 PM IST
ತಮ್ಮದೇ ಪಕ್ಷದ ಮಾಜಿ ಶಾಸಕರೊಬ್ಬರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆ ಶಿವಕುಮಾರ್

ಸಾರಾಂಶ

* ತಮ್ಮದೇ ಪಕ್ಷದ ಮಾಜಿ ಶಾಸಕರೊಬ್ಬರಿಗೆ ಕ್ಷಮೆ ಕೋರಿದ ಡಿಕೆ ಶಿವಕುಮಾರ್ * ಪತ್ರದ ಮೂಲಕ ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್ * ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ ಎಂದು ಪತ್ರ

ಬೆಂಗಳೂರು, (ಮಾ.11): ಮೇಕೆದಾಟು ಪಾದಯಾತ್ರೆ ಎರಡನೇ ಹಂತದ ವೇಳೆ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ಶಾಸಕರೊಬ್ಬರ ಬಳಿ ಕ್ಷಮೆ ಕೋರಿದ್ದಾರೆ.

ಹೌದು..ಮೇಕೆದಾಟು ಪಾದಯಾತ್ರೆಯ ವೇಳೆ ಬಿ.ಆರ್​. ಪಾಟೀಲ್​ ಅವರನ್ನು ತಳ್ಳಿ, ಟೋಪಿ ಕಿತ್ತು ಹಾಕಿದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

Five State Election Result: ಹುಮ್ಮಸ್ಸಿನಲ್ಲಿದ್ದ ಕರ್ನಾಟಕ ಕಾಂಗ್ರೆಸ್‌ಗೆ ಪಂಚರಾಜ್ಯ ಶಾಕ್‌..!

ತಮ್ಮನ್ನು ತಳ್ಳಿ ಅವಮಾನಿಸುವ ಯಾವುದೇ ಉದ್ದೇಶ ಇಲ್ಲ, ನನ್ನ ಅರಿವಿನಲ್ಲೂ ಇಲ್ಲ. ಜನರ ಗುಂಪಿನಲ್ಲಿ ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ದರೆ ವಿಷಾದಿಸುವೆ ಎಂದು ಮಾಜಿ ಶಾಸಕ ಬಿ.ಆರ್​. ಪಾಟೀಲ್​ ಅವರಿಗೆ ಪತ್ರ ಬರೆದು ಡಿ.ಕೆ.ಶಿವಕುಮಾರ್​ ಕ್ಷಮೆ ಕೋರಿದ್ದಾರೆ.

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು ಕಂಡು ನನಗೆ ಖೇದವಾಗಿದೆ. ತಮ್ಮಂತಹ ಹಿರಿಯರ ಜೊತೆ ಅನುಚಿತವಾಗಿ ನಡೆದುಕೊಳ್ಳುವುದನ್ನು ಕನಸು ಮನಸ್ಸಿನಲ್ಲಿ ಎಣಿಸಲು ಸಾಧ್ಯವಿಲ್ಲ. ಜನರ ನೂಕು ನುಗ್ಗಲಿನ ಸಮಯದಲ್ಲಿ ಏನಾದರೂ ಅಂತಹ ಅಚಾತುರ್ಯ ನಡೆದಿದ್ದರೆ ಅದಕ್ಕಾಗಿ ವಿಷಾದಿಸುತ್ತೇನೆಂದು ಹೇಳಿದ್ದಾರೆ.

 ಪಾದಯಾತ್ರೆ ಅರಮನೆ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಪಾಟೀಲ್​ ಅವರನ್ನು ಅನುಚಿತವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿ ಬಂದಿತ್ತು. ಪಾಟೀಲ್​ ಈ ಬಗ್ಗೆ ಪಕ್ಷದ ಹೈಕಮಾಂಡ್​ಗೂ ದೂರು ನೀಡಿದ್ದರು. ಹಿರಿಯ ಮುಖಂಡರಿಗೆ ಅಪಮಾನ ಮಾಡಿದ ಬಗ್ಗೆ ಹೈಕಮಾಂಡ್​ ಸಹ ಅಸಮಾಧಾನ ವ್ಯಕ್ತಪಡಿಸಿತ್ತು. ಆ ಹಿನ್ನೆಲೆಯಲ್ಲಿ ಡಿಕೆಶಿ ಗುರುವಾರ ಪತ್ರ ಬರೆದಿದ್ದಾರೆ. ಗೋವಾದಿಂದ ವಾಪಸಾದ ಬಳಿಕ ಖುದ್ದು ಭೇಟಿ ಮಾಡುವುದಾಗಿಯೂ ಪತ್ರದಲ್ಲಿ ಡಿಕೆಶಿ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ : ಪಾದಯಾತ್ರೆಯಲ್ಲೇ ಬಿಆರ್ ಪಾಟೀಲ್ ಟೋಪಿ ಕಿತ್ತೆಸೆದು ತಳ್ಳಿದ್ರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು. ಅಲ್ಲದೇ ಈ ಬಗ್ಗೆ ಸಾಕಷ್ಟು ಟ್ರೋಲ್‌ಗಳು ಸಹ ಮಾಡಲಾಗಿತ್ತು.

ಇನ್ನು ಬಿಆರ್ ಪಾಟೀಲ್ ಅವರಿಗೆ ಅವಮಾನ ಮಾಡಿದ್ದಾರೆಂದು ಕ್ಷೇತ್ರದ ಅಭಿಮಾನಿಗಳು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್