ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಾಧ್ಯತೆ! ಡಿಕೆಶಿ ಹಿಂದೆ ಮಾತು ಕೊಟ್ಟಿದ್ದೇನು?

Published : Jun 03, 2026, 01:58 PM IST
DK Shivakumars Promise Who Will Get the Bengaluru Development  Ramalinga Reddy in Focus rav

ಸಾರಾಂಶ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿ ಇಟ್ಟುಕೊಳ್ಳುತ್ತಾರೆಯೇ ಅಥವಾ ಹಿರಿಯ ಶಾಸಕ ರಾಮಲಿಂಗಾರೆಡ್ಡಿಗೆ ನೀಡುತ್ತಾರೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಿದೆ.

ಬೆಂಗಳೂರು (ಜೂ.3): ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಈ ಐತಿಹಾಸಿ ಕಾರ್ಯಕ್ರಮದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಳಿಕ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನ ತಮ್ಮ ಬಳಿಯೇ ಇಟ್ಟುಕೊಳ್ಳುತ್ತಾರಾ? ಅಥವಾ ಹಿರಿಯ ಶಾಸಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಬಿಟ್ಟುಕೊಡ್ತಾರಾ? ಎಂಬ ಕುತೂಹಲ ಈಗ ರಾಜಕೀಯ ವಲಯದಲ್ಲಿ ಜೋರಾಗಿದೆ.

ಮುಖ್ಯಮಂತ್ರಿಯಾಗಿ ರಾಜ್ಯದ ಆಡಳಿತ ಜವಾಬ್ದಾರಿ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ನಿರ್ವಹಿಸುವುದು ಕಷ್ಟಸಾಧ್ಯ. ಇದರ ಜೊತೆಗೆ ಮುಂದೆ ಜಿಬಿಎ ಚುನಾವಣೆ ಬರುವುದರಿಂದ ಅದರ ನಿರ್ವಹಣೆಯೇ ದೊಡ್ಡ ಸವಾಲಾಗಬಹುದು. ಈ ಹಿನ್ನೆಲೆ ಈಗಿರುವ ನಗರಾಭಿವೃದ್ಧಿ ಖಾತೆಯನ್ನ ರಾಮಲಿಂಗಾರೆಡ್ಡಿಗೆ ವಹಿಸುವ ಸಾಧ್ಯತೆ ಇದೆ.

ಈ ಸಾಧ್ಯತೆಗೆ ಕೆಲವು ಕಾರಣಗಳೂ ಇವೆ. ಕಳೆದ ಬಾರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿ ತಮಗೆ ಬೇಕಾದ ಸ್ಥಾನ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ರಾಮಲಿಂಗಾರೆಡ್ಡಿಗೆ ನಿರಾಸೆಯಾಗಿತ್ತು. ಸಿದ್ದರಾಮಯ್ಯರ ಸಂಪುಟದಲ್ಲಿ ತಮಗೆ ಮಹತ್ವದ ಖಾತೆ ಸಿಗದ ಹಿನ್ನೆಲೆ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಆದರೆ ಇದೇ ವೇಳೆ ಡಿಕೆ ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರಿಗೆ ಮಾತುಕೊಟ್ಟಿದ್ದರು, 'ಮುಂದೆ ನಾನು ಸಿಎಂ ಆಗುತ್ತೇನೆ, ಆಗ ಬೆಂಗಳೂರು ನಗರಾಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಜವಾಬ್ದಾರಿ ನಿಮಗೆ ನೀಡುತ್ತೇನೆ ಎಂದು ಭರವಸೆ ನೀಡಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಈ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ಖಾತೆ ರಾಮಲಿಂಗಾರೆಡ್ಡಿಗೆ ನೀಡುವ ಸಾಧ್ಯತೆಯಿದೆ.

ಬೆಂಗಳೂರು ನಾಡಿ ಮಿಡಿತ ತಿಳಿದ ನಾಯಕನಿಗೆ ಜವಾಬ್ದಾರಿ

ಬೆಂಗಳೂರು ನಗರದ ರಾಜಕೀಯ ಮತ್ತು ಆಡಳಿತಾತ್ಮಕ ನಾಡಿ ಮಿಡಿತ ಅರಿತವರಿಗೆ ಮಾತ್ರ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಹೊಣೆಗಾರಿಕೆ ವಹಿಸುವುದು ಉದ್ದೇಶವಾಗಿದೆ. ಈ ವಿಚಾರವಾಗಿ ರಾಮಲಿಂಗಾರೆಡ್ಡಿ ಅವರಿಗೆ ಇಲಾಖೆಯ ಜವಾಬ್ದಾರಿ ನೀಡುವ ಹೆಚ್ಚಿನ ಸಾಧ್ಯತೆಯಿದೆ. ಹೀಗಾಗಿ ರಾಮಲಿಂಗಾರೆಡ್ಡಿ ಅವರಿಗೆ ಮಾತು ಕೊಟ್ಟಂತೆ ಈ ಜವಾಬ್ದಾರಿ ವಹಿಸುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕೆ ಶಿವಕುಮಾರ್ ಸಂಪುಟದ ಮೊದಲ ಹೆಜ್ಜೆ: 13 ಸಚಿವರು, 14 ಘಟಾನುಘಟಿ ನಾಯಕರಿಗೆ ನಿರಾಸೆ?
Karnataka CM Oath ceremony: ವಿಜಯಾನಂದ ಕಾಶಪ್ಪನವರ್‌ಗೆ ಕೈ ತಪ್ಪಿದ ಸಚಿವ ಸ್ಥಾನ, ಪ್ರತಿಭಟನೆ ನಡೆಸಿದ ಬೆಂಬಲಿಗರು ಪೊಲೀಸರ ವಶಕ್ಕೆ