ಚುನಾವಣೆ ಗೆಲ್ಲಲು ರಾಜಕೀಯ ತಂತ್ರಗಾರ ಪ್ರಶಾಂತ್‌ಗೆ ಡಿಎಂಕೆ ಮೊರೆ!

Published : Nov 30, 2019, 10:51 AM IST
ಚುನಾವಣೆ ಗೆಲ್ಲಲು ರಾಜಕೀಯ ತಂತ್ರಗಾರ ಪ್ರಶಾಂತ್‌ಗೆ ಡಿಎಂಕೆ ಮೊರೆ!

ಸಾರಾಂಶ

ಚುನಾವಣೆ ಗೆಲ್ಲಲು ಪ್ರಶಾಂತ್‌ಗೆ ಡಿಎಂಕೆ ಮೊರೆ| 2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ

ಚೆನ್ನೈ[ನ.30]:: ಆಂಧ್ರ ಪ್ರದೇಶದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರನ್ನು ಸೆಳೆಯಲು ಡಿಎಂಕೆ ಮುಂದಾಗಿದೆ. ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್‌ ಹಾಗೂ ಪ್ರಶಾಂತ್‌ ಕಿಶೋರ್‌ ಅವರ ಮಧ್ಯೆ ಇತ್ತೀಚೆಗೆ ನಡೆದ ಮಾತುಕತೆ ಇಂಥದ್ದೊಂದು ಸಾಧ್ಯತೆಯನ್ನು ಹುಟ್ಟುಹಾಕಿದೆ.

ಡಿಎಂಕೆಯ ರಾಜಕೀಯ ಸಲಹೆಗಾರ ಸುನೀಲ್‌ ಕೆ.ನಿರ್ಗಮನದ ಹಿನ್ನೆಲೆಯಲ್ಲಿ ಪಕ್ಷ ಪ್ರಶಾಂತ್‌ ಕಿಶೋರ್‌ ಅವರನ್ನು ನೆಚ್ಚಿಕೊಂಡಿದೆ. ಈ ನಡುವೆ ಎಐಎಡಿಎಂಕೆ ಕೂಡ ಪ್ರಶಾಂತ್‌ ಕಿಶೋರ್‌ ಅವರನ್ನು ಸಂಪರ್ಕಿಸಿದೆ. ಮಾತುಕತೆ ಅಂತಿಮ ಹಂತ ತಲುಪಿದ್ದು, 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್‌ ಕಿಶೋರ್‌ ಡಿಎಂಕೆಯ ಚುನಾವಣೆ ಪ್ರಚಾರವನ್ನು ಮುನ್ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮುನ್ನ ಪ್ರಶಾಂತ್‌ ಕಿಶೋರ್‌ ಬಿಜೆಪಿ, ಕಾಂಗ್ರೆಸ್‌, ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ಕಳೆದ ಕೆಲ ವರ್ಷಗಳಿಂದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದರು.

ಸದ್ಯ ನಟ ಕಮಲ್‌ ಹಾಸನ್‌ ಅವರ ಮಕ್ಕಲ್‌ ನೀಧಿ ಮಯ್ಯಂ ಪಕ್ಷದ ಜೊತೆ ಪ್ರಶಾಂತ್‌ ಕಿಶೋರ್‌ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಒಪ್ಪಂದ ಜನವರಿಯಲ್ಲಿ ಕೊನೆಗೊಳ್ಳಲಿದ್ದು, ಒಪ್ಪಂದವನ್ನು ವಿಸ್ತರಿಸುವ ಸಾಧ್ಯತೆ ಇಲ್ಲ. ಹೀಗಾಗಿ ಪ್ರಶಾಂತ್‌ ಕಿಶೋರ್‌ ಅವರನ್ನು ಸಳೆಯಲು ಡಿಎಂಕೆ ಯತ್ನ ನಡೆಸುತ್ತಿದೆ. 2021ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾಜಿ ಜಯಲಿಲಿತಾ ನಿಧನದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ