ಮುಖ್ಯಮಂತ್ರಿ ಆಗಬೇಕೆಂಬ ಹಗಲುಗನಸು ಬೇಡ: ಎಂ.ಬಿ. ಪಾಟೀಲ್

Published : Sep 03, 2024, 02:41 PM IST
ಮುಖ್ಯಮಂತ್ರಿ ಆಗಬೇಕೆಂಬ ಹಗಲುಗನಸು ಬೇಡ: ಎಂ.ಬಿ. ಪಾಟೀಲ್

ಸಾರಾಂಶ

ಆರ್.ವಿ. ದೇಶಪಾಂಡೆ ಅವರು ಯಾರೋ ಕೇಳಿದ ಪ್ರಶ್ನೆಗೆ ಸಹಜವಾಗಿ ಮಾತನಾಡಿದ್ದಾರೆ. ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಕೇಳಿದ್ದಾರೆ. ಅದು ವಿಷಯವೇ ಅಲ್ಲ, ಅದನ್ನು ಅಲ್ಲಿಗೆ ಬಿಟ್ಟುಬಿಡಿ ಎಂದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ 

ಬೆಂಗಳೂರು(ಸೆ.03):  ಮುಖ್ಯಮಂತ್ರಿ ಆಗುವ ಹಗಲು ಕನಸು ಕಾಣಲು ಯಾರೂ ಹೋಗುವುದು ಬೇಡ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಶಕ್ತಿಶಾಲಿ ಆಗಿದ್ದಾರೆ. ಇನ್ನಷ್ಟು ಶಕ್ತಿಶಾಲಿ ಯಾಗುತ್ತಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗುವ ಪ್ರಶ್ನೆಯೇ ಇಲ್ಲ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಸಷ್ಟಪಡಿಸಿದ್ದಾರೆ. 

ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ದೇಶಪಾಂಡೆ ಅವರ ಹೇಳಿಕೆಗೆ ಸಂಬಂಧಿಸಿ ಮಾತನಾಡಿದ ಅವರು, 'ಆರ್.ವಿ. ದೇಶಪಾಂಡೆ ಅವರು ಯಾರೋ ಕೇಳಿದ ಪ್ರಶ್ನೆಗೆ ಸಹಜವಾಗಿ ಮಾತನಾಡಿದ್ದಾರೆ. ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಕೇಳಿದ್ದಾರೆ. ಅದು ವಿಷಯವೇ ಅಲ್ಲ, ಅದನ್ನು ಅಲ್ಲಿಗೆ ಬಿಟ್ಟುಬಿಡಿ' ಎಂದು ಹೇಳಿದರು. 

ನನ್ನ ತಂಟೆಗೆ ಬಂದವರನ್ನ ಹಿಂದೆಯೂ ಬಿಟ್ಟಿಲ್ಲ ಮುಂದೆಯೂ ಬಿಡಲ್ಲ: ಏಕವಚನದಲ್ಲೇ ನಿರಾಣಿಗೆ ಎಂ.ಬಿ. ಪಾಟೀಲ್‌ ತಿರುಗೇಟು ..!

ಉಳಿದಂತೆ ಹೇಳುವುದಾದರೆ ಮುಖ್ಯಮಂತ್ರಿ ವಿಚಾರವಾಗಿ ಯಾರೂ ಹಗಲು ಕನಸು ಕಾಣುವುದು ಬೇಡ. ಹೈಕೋರ್ಟ್ ತೀರ್ಪಿನಲ್ಲಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಆಗುವ ಪ್ರಶ್ನೆಯೇ ಇಲ್ಲ. ಮುಡಾದಲ್ಲಿ ಅವರು ಭಾಗಿಯಾಗಿಲ್ಲ, ಹೀಗಾಗಿ ದೋಷಮುಕ್ತರಾಗುತ್ತಾರೆ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್