ಮದ್ಯ ವಿತರಿಸೋ ಬಿಜೆಪಿಗೆ ನೈತಿಕತೆ ಇದೆಯೇ?: ಸಿಎಂ ಸಿದ್ದರಾಮಯ್ಯ

Published : Jul 10, 2024, 11:48 AM ISTUpdated : Jul 10, 2024, 12:10 PM IST
ಮದ್ಯ ವಿತರಿಸೋ ಬಿಜೆಪಿಗೆ ನೈತಿಕತೆ ಇದೆಯೇ?: ಸಿಎಂ ಸಿದ್ದರಾಮಯ್ಯ

ಸಾರಾಂಶ

ಡಾ.ಸುಧಾಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಭಾಗಿಯಾಗಿದ್ದರು. ವೇದಿಕೆಯಲ್ಲೇ ಬಹಿರಂಗವಾಗಿ ಕಾರ್ಯಕರ್ತರಿಗೆ ಮದ್ಯ ವಿತರಣೆ ಮಾಡಿದ್ದಾರೆ. ಸಂಸ್ಕೃತಿ, ಸಂಪ್ರದಾಯ, ಸತ್ಸಂಗದ ಬಗ್ಗೆ ಬಹಳ ಮಾತನಾಡೋರು ಇಂತಹ ಕೆಲಸ ಮಾಡುತ್ತಾರಾ ಎಂದ ಸಿಎಂ ಸಿದ್ದರಾಮಯ್ಯ 

ಬೆಂಗಳೂರು(ಜು.10):   'ಬಿಜೆಪಿ ಸಂಸದ ಮಿಸ್ಟರ್ ಡಾ.ಸುಧಾಕರ ನೆಲಮಂಗಲದಲ್ಲಿ ಆಯೋಜಿಸಿದ್ದ ತಮ್ಮ ಪಕ್ಷದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಬಹಿರಂಗವಾಗಿ ಮದ್ಯ ಹಂಚಿದ್ದಾರೆ. ಸಂಸ್ಕೃತಿ, ಸಂಪ್ರದಾಯ, ಸತ್ಸಂಗದ ಮಾತ ನಾಡುವವರಿಗೆ ನೈತಿಕತೆ ಇದೆಯೇ' ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಡಾ.ಸುಧಾಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಭಾಗಿಯಾಗಿದ್ದರು. ವೇದಿಕೆಯಲ್ಲೇ ಬಹಿರಂಗವಾಗಿ ಕಾರ್ಯಕರ್ತರಿಗೆ ಮದ್ಯ ವಿತರಣೆ ಮಾಡಿದ್ದಾರೆ. ಸಂಸ್ಕೃತಿ, ಸಂಪ್ರದಾಯ, ಸತ್ಸಂಗದ ಬಗ್ಗೆ ಬಹಳ ಮಾತನಾಡೋರು ಇಂತಹ ಕೆಲಸ ಮಾಡುತ್ತಾರಾ' ಎಂದರು.

ನೂತನ ಸಂಸದ ಡಾ ಕೆ ಸುಧಾಕರ್‌ಗೆ ಅಭಿನಂದನಾ ಸಮಾರಂಭ: ಎಣ್ಣೆ ಬಾಡೂಟಕ್ಕೆ ಮುಗಿಬಿದ್ದ ಜನರು!

ಬಿಜೆಪಿ ಸಭೆಯಲ್ಲಿ ಮದ್ಯ ಹಂಚಿದ ಮುಖಂಡ ವಜಾ

ಬೆಂಗಳೂರು: ನೂತನ ಬಿಜೆಪಿ ಸಂಸದರ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯ ಹಂಚಿಕೆ ಮಾಡಿದ ಹಿನ್ನೆಲೆಯಲ್ಲಿ ನೆಲ ಮಂಗಲ ಮಂಡಲ ಅಧ್ಯಕ್ಷ ಜಗ ದೀಶ್ ಚೌಧರಿ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆಗೊಳಿಸಿ ಆದೇಶಿಸಲಾ ಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ಬಿಜೆಪಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮ ಕೃಷ್ಣಪ್ಪ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!