
ಬೆಂಗಳೂರು, (ಏ.04): ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಎಂದು ಕರೆಯಬೇಡಿ.ಇದು ಅವರಿಗೆ ಅಪಮಾನ ಮಾಡಿದಂತೆ ಆಗಲಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ಇಮದು (ಭಾನುವಾರ) ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು. ಬದಲಾದ ಸಂದರ್ಭದಲ್ಲಿ ಅವರು ಮತ್ತೆ ಸಿಎಂ ಆಗಲು ಸಾಧ್ಯವಾಗಲಿಲ್ಲ. ಜನ ಇಷ್ಟ ಪಟ್ಟರೆ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದರು.
'ಸಿದ್ದು ವ್ಯಕ್ತಿತ್ವ ಹೇಗಿದೆ ಅಂತ ನೀವೇ ತೂಕಮಾಡಿ, ಅವರೆಂತ ನಾಯಕ ಅನ್ನೋದು ನಿಮಗೇ ಗೊತ್ತಾಗುತ್ತೆ'
ಜನರ ಕಷ್ಟಕ್ಕೆ ಅವರು ಸ್ಪಂದಿಸಿದ್ದಾಗ, ಅವರು ಹತ್ತಿರ ಆಗುತ್ತಾರೆ. ಮುಂದೆ ಮತ್ತೆ ಒಳ್ಳೆಯದಾಗಬಹುದು. ಮಾಜಿ ಮುಖ್ಯಮಂತ್ರಿ ಎಂದು ಅವರನ್ನ ಕರೆಯಬೇಡಿ ಎಂದು ಮನವಿ ಮಾಡುತ್ತೇನೆ. ಅವರನ್ನ ವಿರೋಧ ಪಕ್ಷದ ನಾಯಕರು ಅಂತ ಕರೆಯಿರಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.