ಪಂಚರಾಜ್ಯ ಚುನಾವಣೆ ವೇಳೆ ಇಡಿ ದಾಳಿ ಖಂಡನೀಯ: ಮಲ್ಲಿಕಾರ್ಜುನ ಖರ್ಗೆ

Published : Oct 29, 2023, 12:15 PM IST
ಪಂಚರಾಜ್ಯ ಚುನಾವಣೆ ವೇಳೆ ಇಡಿ ದಾಳಿ ಖಂಡನೀಯ: ಮಲ್ಲಿಕಾರ್ಜುನ ಖರ್ಗೆ

ಸಾರಾಂಶ

ಪ್ರಸ್ತುತ ಪಂಚ ರಾಜ್ಯಗಳ ಚುನಾವಣೆ ಸಮಯದಲ್ಲಿ ಇಡಿ ದಾಳಿ ಮಾಡಿರುವ ತಪ್ಪಿನ ಅರಿವು ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕಾಗಲಿದೆ ಎಂದ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜಪುನ ಖರ್ಗೆ 

ಕಲಬುರಗಿ(ಅ.29):  ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಪುತ್ರನ‌ ಮನೆ ಮೇಲೆ ಇಡಿ ದಾಳಿ ನಡೆಸುತ್ತಿರುವುದನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜಪುನ ಖರ್ಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪಂಚ ರಾಜ್ಯಗಳ ಚುನಾವಣೆ ಸಮಯದಲ್ಲಿ ಇಡಿ ದಾಳಿ ಮಾಡಿರುವ ತಪ್ಪಿನ ಅರಿವು ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕಾಗಲಿದೆ ಎಂದರು.
ಕಾಂಗ್ರೆಸ್ ಇಡಿ ಹಾಗೂ ಐಟಿ ಸೇರಿ ಇತರ ಯಾವುದೇ ದಾಳಿಗಳಿಗೆ ಹೆದರುವುದಿಲ್ಲ.‌ ಕಾಂಗ್ರೆಸ್‌ ಪ್ರಜಾಪ್ರಭುತ್ವ ನೆಲೆಗಟ್ಟಿನ ಹಾಗೂ ನೈತಿಕ ಮೌಲ್ಯಗಳ ಆಧಾರದ ಮೇಲೆ ರಾಜಕಾರಣ ಮಾಡುತ್ತದೆ.‌ ಪ್ರಜಾಸತ್ತಾತ್ಮಕ ನೆಲೆ ಆಧಾರದ ಮೇಲೆ ಪಕ್ಷ ಚುನಾವಣೆ ಎದುರಿಸಲಿದೆ. ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕೆ ತಪ್ಪಿನ ಅರಿವಾಗುತ್ತದೆ ಎಂದರು.

ಪ್ರಿಯಾಂಕ್‌ರದ್ದು ಬಾಲಿಶತನದ ವರ್ತನೆ: ಸಂಸದ ಉಮೇಶ್ ಜಾಧವ್ ಗೇಲಿ

ಪಂಚರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ. ಈಗಾಗಲೇ ಒಂದು ಹಂತದ ಪ್ರಚಾರ ಕೈಗೊಳ್ಳಲಾಗಿದೆ. ಎಲ್ಲ ಕಡೆ ಉತ್ತಮ ವಾತಾವರಣ ಕಂಡಿದೆ.‌ ಅನೇಕ ಸವಾಲಿನ ನಡುವೆ ಈ ಹಿಂದೆ ಅನೇಕ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈಗಲೂ ಅಂತಹ ಸಾಧನೆ ತೋರುವ ವಿಶ್ವಾಸವಿದೆ ಎಂದರು.

ಸವಾಲಿನ ನಡುವೆ ತಾವು ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ನಿಭಾಯಿಸಲಾಗಿದೆ ಎಂದು ಮಾಧ್ಯಮಗಳೇ ವರದಿ ಮಾಡಿವೆ. ತಮ್ಮ ರಾಜಕೀಯ ಜೀವನುದುದ್ದಕ್ಕೂ ತಮಗೆ ವಹಿಸಿಕೊಟ್ಟ ಸಚಿವ ಸ್ಥಾನ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ವಿಪಕ್ಷ ನಾಯಕ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಸವಾಲುಗಳನ್ನು ಎದುರಿಸಿಯೇ ನಿಭಾಯಿಸಲಾಗಿದೆ ಎಂದು ಡಾ. ಖರ್ಗೆ ವಿವರಣೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ